* ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜಿಗಣೆಹಳ್ಳಿಯಲ್ಲಿ ನಡೆದ ಘಟನೆ* ಹಾವುಗಳು ಕಚ್ಚಿ ಮೂವರು ಮಹಿಳೆಯರು ಸಾವು* ಹಾವಿಗೆ ಮೂವರ ಬಲಿ

ಕಡೂರು(ಜೂ.28): ಒಂದೇ ದಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವುಗಳು ಕಚ್ಚಿ ಮೂವರು ಮಹಿಳೆಯರು ಮೃತಪಟ್ಟಿರುವ ಪ್ರತ್ಯೇಕ ಘಟನೆಗಳು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಶನಿವಾರ ನಡೆದಿದೆ.

Add Asianetnews Kannada as a Preferred SourcegooglePreferred

ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ಪೊಲೀಸ್‌ ಪೇದೆಯೊಬ್ಬರ ಪತ್ನಿ ಅನಿತಾ (33) ಮೃತಪಟ್ಟಿರುವ ಘಟನೆ ಜಿಗಣೆಹಳ್ಳಿಯಲ್ಲಿ ನಡೆದಿದೆ. 

ತಾಳಿಕೋಟೆ: ಸೀಟಿನ ಕೆಳಗೆ ಹಾವಿದ್ದರೂ ಗೊತ್ತಿಲ್ಲದೆ ಬೈಕಲ್ಲಿ ಸುತ್ತಿದ..!

ಇನ್ನು ತಾಲೂಕಿನ ನಿಡಘಟ್ಟದಲ್ಲಿ ಸಂಜೆ 7 ಗಂಟೆ ಸಮಯದಲ್ಲಿ ತೋಟದಲ್ಲಿ ಎಡೆಮಟ್ಟೆ ಆರಿಸುತ್ತಿದ್ದಾಗ ಹಾವು ಕಚ್ಚಿ ಶಾರದಾ ಬಸಪ್ಪ (65) ಸಾವನ್ನಪ್ಪಿದ್ದಾರೆ. ಟೊಮೆಟೋ ಕೊಯ್ಯುವಾಗ ಹಾವು ಕಚ್ಚಿದ್ದರಿಂದ ಸಖರಾಯಪಟ್ಟಣ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದ ರತ್ನಮ್ಮ ಮೃತಪಟ್ಟಿದ್ದಾರೆ.