ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಬಳಿಯ ಕೆರೆಯಲ್ಲಿ ನಡೆದ ಘಟನೆ. 

ಚಿತ್ರದುರ್ಗ(ಮಾ.29): ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಬಳಿಯ ಕೆರೆಯಲ್ಲಿ ನಿನ್ನೆ(ಮಂಗಳವಾರ) ಸಂಜೆ ನಡೆದಿದೆ. 

Add Asianetnews Kannada as a Preferred SourcegooglePreferred

ನಂದನಹೊಸೂರು ಗ್ರಾಮದ ಗಿರೀಶ್ (18), ಹೊರಕೆರೆದೇವರಪುರ ಗ್ರಾಮದ ಸಂಜಯ್ (18), ಕಣಿವೆ ಜೋಗಿಹಳ್ಳಿ ಗ್ರಾಮದ ಮನು(19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. 

MUSLIM RESERVATION: ಮುಸ್ಲಿಂ ಮೀಸಲಾತಿ ರದ್ದುಪಡಿಸಿದ ಕ್ರಮಕ್ಕೆ ಎಸ್‌ಡಿಪಿಐ ಪ್ರತಿಭಟನೆ

ನಿನ್ನೆ ಸಂಜೆ ವೇಳೆ ಕೆರೆಯಲ್ಲಿ ಯುವಕರು ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಅಮತ ತಿಳಿದು ಬಂದಿದೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.