ನ್ಯಾಯಬೆಲೆ ಅಂಗಡಿಗಳಲ್ಲಿ ಆನ್‌ಲೈನ್‌ ಪಡಿತರ ವಿತರಣೆಯನ್ನು ಬೆರಳಚ್ಚು ಬಯೋಮೆಟ್ರಿಕ್‌ ಮೂಲಕ ಮಾಡಲಾಗುತ್ತಿದೆ. ಆದರೆ ಈಗ ಕರೋನಾ ವೈರಸ್‌ನಿಂದಾಗಿ ಬೆರಳಚ್ಚು ಬಯೋಮೆಟ್ರಿಕ್‌ ನೀಡುವ ಬದಲು ಆಧಾರ್‌ ಆಧಾರಿತ ಮೊಬೈಲ್‌ ಒಟಿಪಿ ಮೂಲಕ ಪಡಿತರ ವಿತರಣೆಯನ್ನು ಜಾರಿಗೆ ತರಲಾಗಿದೆ. 

ಮಂಗಳೂರು(ಮಾ.18): ನ್ಯಾಯಬೆಲೆ ಅಂಗಡಿಗಳಲ್ಲಿ ಆನ್‌ಲೈನ್‌ ಪಡಿತರ ವಿತರಣೆಯನ್ನು ಬೆರಳಚ್ಚು ಬಯೋಮೆಟ್ರಿಕ್‌ ಮೂಲಕ ಮಾಡಲಾಗುತ್ತಿದೆ. ಆದರೆ ಈಗ ಕರೋನಾ ವೈರಸ್‌ನಿಂದಾಗಿ ಬೆರಳಚ್ಚು ಬಯೋಮೆಟ್ರಿಕ್‌ ನೀಡುವ ಬದಲು ಆಧಾರ್‌ ಆಧಾರಿತ ಮೊಬೈಲ್‌ ಒಟಿಪಿ ಮೂಲಕ ಪಡಿತರ ವಿತರಣೆಯನ್ನು ಜಾರಿಗೆ ತರಲಾಗಿದೆ.

Add Asianetnews Kannada as a Preferred SourcegooglePreferred

ಇದನ್ನು ಬುಧವಾರದಿಂದ ದ.ಕ. ಜಿಲ್ಲೆಯಲ್ಲಿ ಜಾರಿಗೆ ತಂದಿದ್ದು, ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಮಾಹಿತಿಯನ್ನು ಪ್ರಚುರಪಡಿಸಲಾಗಿದೆ. ಪಡಿತರ ಪಡೆಯಲು ಬರುವ ಪಡಿತರ ಚೀಟಿದಾರರ ಸಂಖ್ಯೆ ನಮೂದಿಸಿ, ಪಡಿತರ ಪಡೆಯಲು ಬಂದ ಕುಟುಂಬದ ಸದಸ್ಯರ ಹೆಸರು ಆಯ್ಕೆ ಮಾಡಿಕೊಂಡು ನಂತರ ಒಟಿಪಿ ಆಯ್ಕೆ ಮಾಡಬೇಕು ಎನ್ನಲಾಗಿದೆ.

ಕೊರೋನಾ ಕಾಟ: ಕೆಲ ರೈಲುಗಳ ಸಂಚಾರ ತಾತ್ಕಾಲಿಕ ರದ್ದು

ತಕ್ಷಣವೇ ಗ್ರಾಹಕರ ಮೊಬೈಲ್‌ ಸಂಖ್ಯೆಗೆ ಬಂದ ಒಟಿಪಿಯನ್ನು ತಂತ್ರಾಂಶದಲ್ಲಿ ನಮೂದಿಸಿ ನಂತರ ಬಿಲ್‌ ಜನರೇಟ್‌ ಮಾಡಿ, ಪಡಿತರ ವಿತರಣೆ ಮಾಡಬೇಕು. ಇದನ್ನು ತಾತ್ಕಾಲಿಕವಾಗಿ ಜಾರಿಗೆ ತರಲಾಗಿದೆ ಎಂದು ಆಹಾರ ಇಲಾಖೆಯ ಪ್ರಕಟಣೆ ತಿಳಿಸಿದೆ.