ಹವಾಮಾನ ಆಧಾರಿತ ಬೆಳೆ ವಿಮೆ ವ್ಯಾಪ್ತಿಗೆ ಟೊಮೇಟೋ
ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಟೊಮೇಟೊ ಬೆಳೆಯನ್ನು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವ್ಯಾಪ್ತಿಗೆ ಸೇರಿಸಬೇಕೆಂಬ ರೈತರ ಬೇಡಿಕೆಗೆ ಸ್ಪಂದಿಸಿರುವ ತೋಟಗಾರಿಕೆ ಇಲಾಖೆಯು ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.
ಕೋಲಾರ(ಮೇ 21): ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಟೊಮೇಟೊ ಬೆಳೆಯನ್ನು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವ್ಯಾಪ್ತಿಗೆ ಸೇರಿಸಬೇಕೆಂಬ ರೈತರ ಬೇಡಿಕೆಗೆ ಸ್ಪಂದಿಸಿರುವ ತೋಟಗಾರಿಕೆ ಇಲಾಖೆಯು ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.
ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೇೂ ಬೆಳೆಯಲಾಗುತ್ತಿದೆ. ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಸೇರಿದಂತೆ ಒಟ್ಟಾರೆ 3 ಋುತುಮಾನಗಳಿಂದ ಸುಮಾರು 9 ಸಾವಿರ ಹೆಕ್ಟೇರ್ನಲ್ಲಿ ಟೊಮೆಟೊ ಬೆಳೆಯಲಾಗುತ್ತದೆ. ಬಂಗಾರಪೇಟೆ 505, ಕೆಜಿಎಫ್ 745, ಕೋಲಾರ 2,287, ಮಾಲೂರು 1,215, ಮುಳಬಾಗಿಲು 2,748, ಶ್ರೀನಿವಾಸಪುರ 1,301 ಹೆಕ್ಟೇರ್ ಪ್ರದೇಶದಲ್ಲಿ ಟೊಮೆಟೋ ಬೆಳೆಯಲಾಗುತ್ತದೆ.
ಕಾಲುವೆಯಲ್ಲಿ ಹೂಳು ತುಂಬಿ ಗ್ರಾಮಕ್ಕೆ ನುಗ್ಗಿದ ನೀರು..!
ಜಿಲ್ಲೆಯಲ್ಲಿ ಅಂತರ್ಜಲ ಮಟ್ಟಪಾತಾಳಕ್ಕೆ ಕುಸಿದಿದ್ದು, ರೈತರು ಜಲಕ್ಷಾಮದ ನಡುವೆಯೂ ಟೊಮೇಟೊ ಬೆಳೆಯುತ್ತಿದ್ದಾರೆ. ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಟೊಮೇಟೊ ಮಾರುಕಟ್ಟೆಜಿಲ್ಲೆಯಲ್ಲಿದ್ದು, ಇಲ್ಲಿಂದ ಹೊರ ರಾಜ್ಯ ಹಾಗೂ ವಿದೇಶಕ್ಕೆ ಟೊಮೇಟೊ ರಪ್ತಾಗುತ್ತದೆ. ಜಿಲ್ಲೆಯ ಎಪಿಎಂಸಿಗಳಲ್ಲಿ ವರ್ಷಕ್ಕೆ 401 ಕೋಟಿಗೂ ಹೆಚ್ಚು ಟೊಮೆಟೊ ವಹಿವಾಟು ನಡೆಯುತ್ತದೆ.
ಸದ್ಯ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ (ಪಿಎಂಎಫ್ಬಿವೈ) ಟೊಮೇಟೊಗೆ ಬೆಳೆ ವಿಮೆ ಮಾಡಿಸಲು ಅವಕಾಶವಿದೆ. ಆದರೆ, ಟೊಮೇಟೊ ಬೆಳೆಗೆ ಇಳುವರಿ ಆಧಾರಿತ ವಿಮೆ ನೀಡುತ್ತಿರುವುದರಿಂದ ಜಿಲ್ಲೆಯ ರೈತರಿಗೆ ಸಮಸ್ಯೆಯಾಗಿದೆ.
20 ಲಕ್ಷ ಕೋಟಿ ಪ್ಯಾಕೇಜ್ನ ಹಲವು ಯೋಜನೆಗೆ ಸಮ್ಮತಿ!
ಟೊಮೇಟೊ ಬೆಳೆ ಇಳುವರಿ ಅಂದಾಜಿಸಿದಾಗ ಜಿಲ್ಲೆಯಲ್ಲಿ ಈವರೆಗೆ ಇಳುವರಿ ಕುಸಿದಿರುವುದು ತೀರಾ ವಿರಳ. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ? ಕೋಲಾರ ಜಿಲ್ಲೆಯಲ್ಲಿ ಟೊಮೇಟೊ ಇಳುವರಿ ಪ್ರಮಾಣ ಹೆಚ್ಚಿದೆ. ಪಿಎಂಎಫ್ಬಿವೈ ಅಡಿ ಇಳುವರಿ ಆಧರಿಸಿ ಬೆಳೆ ನಷ್ಟಕ್ಕೆ ವಿಮೆ ನೀಡುತ್ತಿರುವುದರಿಂದ ಜಿಲ್ಲೆಯಲ್ಲಿ ಕಳೆದ 4 ವರ್ಷಗಳಲ್ಲಿ ಯಾವೊಬ್ಬ ಟೊಮೇಟೊ ಬೆಳೆಗಾರರು ಬೆಳೆ ಪರಿಹಾರಪಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ವಿಮೆ ಮಾಡಿಸಿದರೂ ರೈತರಿಗೆ ಅನುಕೂಲವಾಗುತ್ತಿಲ್ಲ.
ಬೇಡಿಕೆಗೆ ಸ್ಪಂದನೆ:
ಪಿಎಂಎಫ್ಬಿವೈ ಯೋಜನೆಯಿಂದ ಜಿಲ್ಲೆಯ ಟೊಮೇಟೊ ಬೆಳೆಗಾರರಿಗೆ ಹೆಚ್ಚಿನ ಪ್ರಯೋಜನ ಇಲ್ಲವಾಗಿದೆ. ಮತ್ತೊಂದೆಡೆ ಅತಿವೃಷ್ಟಿ, ಅನಾವೃಷ್ಟಿಹಾಗೂ ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟಸಾಮಾನ್ಯವಾಗಿದೆ. ಆದ ಕಾರಣ ಟೊಮೇಟೊ ಬೆಳೆಯನ್ನು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವ್ಯಾಪ್ತಿಗೆ ಸೇರಿಸಬೇಕೆಂದು ರೈತರು ಹಲವು ವರ್ಷಗಳಿಂದ ಒತ್ತಾಯಿಸುತ್ತಾ ಬಂದಿದ್ದಾರೆ.
ಇದೀಗ ರೈತರ ಬೇಡಿಕೆಗೆ ಸ್ಪಂದಿಸಿರುವ ಸರ್ಕಾರ ಟೊಮೇಟೊ ಬೆಳೆಯನ್ನು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವ್ಯಾಪ್ತಿಗೆ ಸೇರಿಸುವ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿನ ಟೊಮೇಟೊ ಬೆಳೆ ವಿಸ್ತೀರ್ಣ, ಟೊಮೇಟೊ ಬೆಳೆಗಾರರು, ಇಳುವರಿ, ವಾರ್ಷಿಕ ವಹಿವಾಟಿನ ಮಾಹಿತಿ ಸೇರಿದಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದಾರೆ.
ನೀಲಿ ಕ್ರಾಂತಿಗೆ 20 ಸಾವಿರ ಕೋಟಿ ರು: ಕರಾವಳಿ ರಾಜ್ಯಗಳ ಜನರಿಗೆ ಲಾಭ
ಜಿಲ್ಲೆಯ ರೈತರು ಇಳುವರಿ ಆಧಾರಿತ ವಿಮೆಯಲ್ಲಿ ನಿಗದಿಪಡಿಸಲಾದ ಮಿತಿಗಿಂತ ಹೆಚ್ಚು ಇಳುವರಿ ಪಡೆಯುತ್ತಿರುವುದರಿಂದ ಟೊಮೇಟೊ ಬೆಳೆಯನ್ನು ಪಿಎಂಎಫ್ಬಿವೈ ಯೋಜನೆಯ ಬದಲಿಗೆ ಹವಾಮಾನ ಆಧಾರಿತ ವಿಮಾ ಯೋಜನೆ ವ್ಯಾಪ್ತಿಗೆ ಸೇರಿಸುವುದು ಸೂಕ್ತವೆಂದು ತೋಟಗಾರಿಕೆ ಇಲಾಖೆಯು ಪ್ರಸ್ತಾವದಲ್ಲಿ ಶಿಫಾರಸು ಮಾಡಿದೆ.