ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಉರುಳಿ ಬಿದ್ದ ಟ್ರ್ಯಾಕ್ಟರ್‌| ಇಬ್ಬರು ಸ್ಥಳದಲ್ಲಿಯೇ ಇಬ್ಬರು ಸಾವು| ಕಲಬುರಗಿ ಜಿಲ್ಲೆ ಶಹಾಬಾದ ತಾಲೂಕಿನ ಮರತೂರ ಸ್ಟೇಷನ್‌ ತಾಂಡಾದ ಬಳಿ ನಡೆದ ಘಟನೆ| ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಹಾಬಾದ್‌ ಪಿಐ ಬಿ.ಅಮರೇಶ|

ಶಹಾಬಾದ(ಮೇ.20): ಟ್ರ್ಯಾಕ್ಟರ್‌ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರ ಸ್ಟೇಷನ್‌ ತಾಂಡಾದ ಬಳಿ ಮಂಗಳವಾರ ನಡೆದಿದೆ. ಮೃತರನ್ನ ಪ್ರಭು ರಾಠೋಡ (25), ದೇವರಾಜ ಚವ್ಹಾಣ (30) ಎಂದು ಗುರುತಿಸಲಾಗಿದೆ.

Add Asianetnews Kannada as a Preferred SourcegooglePreferred

ಬೆಳಗ್ಗೆ ಸ್ಟೇಷನ್‌ ತಾಂಡಾದಿಂದ ಮರತೂರ ಗ್ರಾಮದತ್ತ ಹೊರಟಿದ್ದ ಟ್ರ್ಯಾಕ್ಟರ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. 

ರಾಜ್ಯಕ್ಕೆ ಮುಳುವಾದ ಮುಂಬೈ ಸಂಪರ್ಕ; ದಿನೇ ದಿನೇ ಹೆಚ್ಚಾಗುತ್ತಿವೆ ಪಾಸಿಟೀವ್ ಕೇಸ್‌ಗಳು

ಘಟನಾ ಸ್ಥಳಕ್ಕೆ ಶಹಾಬಾದ್‌ ಪಿಐ ಬಿ.ಅಮರೇಶ ಭೇಟ್ಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಹಾಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.