Asianet Suvarna News Asianet Suvarna News

Chikkamagaluru: ಹಬ್ಬದ ಪ್ರಯುಕ್ತ ಮುಳ್ಳಯ್ಯನಗಿರಿಗೆ ಸರ್ಕಾರಿ ನೌಕರರಿಂದ ಚಾರಣ

 ಚಿಕ್ಕಮಗಳೂರು ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ, ಅಡ್ವಂಚೇರ್ ಕ್ಲಬ್ ಸಹಯೋಗದೊಂದಿಗೆ ಚಿಕ್ಕಮಗಳೂರು ಹಬ್ಬದ ಪ್ರಯುಕ್ತ ಇಂದು ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ನೌಕರರಿಗೆ ಕಾಲ್ನಡಿಗೆಯಲ್ಲಿ ಚಾರಣ ವನ್ನು ಆಯೋಜನೆ ಮಾಡಲಾಗಿತ್ತು.

Trekking by government employees to Mullayanagiri on the occasion of the festival gow
Author
First Published Jan 5, 2023, 8:29 PM IST

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ 

ಚಿಕ್ಕಮಗಳೂರು (ಜ.5): ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ, ಅಡ್ವಂಚೇರ್ ಕ್ಲಬ್ ಸಹಯೋಗದೊಂದಿಗೆ  ಚಿಕ್ಕಮಗಳೂರು ಹಬ್ಬದ ಪ್ರಯುಕ್ತ ಇಂದು ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ನೌಕರರಿಗೆ ಕಾಲ್ನಡಿಗೆಯಲ್ಲಿ ಚಾರಣ ವನ್ನು ಆಯೋಜನೆ ಮಾಡಲಾಗಿತ್ತು. ಚಿಕ್ಕಮಗಳೂರು ತಾಲ್ಲೂಕಿನ  ಮುಳ್ಳಯ್ಯನಗಿರಿಗೆ ಚಾರಣವನ್ನು ನಡೆಸುವ ಮೂಲಕ ಅತಿಯಾದ ವಾಹನಗಳ ದಟ್ಟಣೆಯಿಂದ ಪರಿಸರ ಮಾಲಿನ್ಯವಾಗುವುದರ ಬಗ್ಗೆ ಸರ್ಕಾರಿ ಅಧಿಕಾರಿಗಳು ಜಾಗೃತಿ ಮೂಡಿಸಿದರು. 

ಸರ್ಪದಾರಿಯ ಮೂಲಕ ಕಾಲ್ನಡಿಗೆ ಆರಂಭ: 
ಗಿರಿಶ್ರೇಣಿಯಲ್ಲಿ ವಾಹನಗಳಿಂದ ಪ್ರಕೃತಿಯ ಸೌಂದರ್ಯವನ್ನು ಸವಿಯುವ ಬದಲು ಕಾಲ್ನಡಿಗೆಯ ಮೂಲಕ ಚಾರಣವನ್ನು ಪ್ರಯತ್ನಿಸಿದರೆ ಹೊಸತನದ ಅನುಭವ ಹಾಗೂ ಪ್ರಕೃತಿ ಸೌಂದರ್ಯವನ್ನು ಸಮೀಪದಿಂದ ಆನಂದಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಹೇಳಿದರು.ಗಿರಿಶ್ರೇಣಿಗಳಲ್ಲಿ ಚಾರಣಕ್ಕೆ ತೆರಳುವ ಮುನ್ನ ತಂಡಗಳನ್ನು ರಚಿಸಿಕೊಂಡು ಕಾಲ್ನಡಿಗೆಯಲ್ಲಿ ಸಂಚರಿಸಲು ಪ್ರಯತ್ನಿಸಬೇಕು. ಅತಿಯಾದ ವಾಹನಗಳ ದಟ್ಟಣೆಯಿಂದ ಪರಿಸರ ಮಾಲಿನ್ಯವಾಗುವು ದಲ್ಲದೇ ಇದರಿಂದ ಕೆಲವು ಸ್ಥಳಗಳಿಗೆ ತೆರಳಲಾಗುವುದಿಲ್ಲ.

ಈ ಹಿನ್ನೆಲೆಯಲ್ಲಿ ಕಾಲ್ನಡಿಗೆಯಲ್ಲಿ ಚಾರಣ ವನ್ನು ಆರಂಭಿಸಿದರೆ ಆರೋಗ್ಯ ವೃದ್ದಿಯೊಂದಿಗೆ ಪರಿಸರವನ್ನು ಹತ್ತಿರದಿಂದ ಸವಿಯಲು ಸಾಧ್ಯ ಎಂದರು.ಜಿಲ್ಲೆಯ ಮಲೆನಾಡು ಭಾಗವು ಅತ್ಯಂತ ರಮಣಿಯವಾದ ಪ್ರದೇಶ. ಇಂತಹ ಜಿಲ್ಲೆಯಲ್ಲಿ ಜನಿಸಿರುವ ಹಾಗೂ ಕಾರ್ಯನಿರ್ವಹಿಸುತ್ತಿರುವ ನಾವೆಲ್ಲರೂ ಪುಣ್ಯವಂತರು. ನಗರದಿಂದ ಕೇವಲ 30 ಕಿ.ಮೀ. ಅಂತರದಲ್ಲಿರುವ ಪಶ್ಚಿಮಘಟ್ಟ ಪ್ರದೇಶ ಅಪರೂಪದ ಗಿಡ-ಮರಗಳೊಂದಿಗೆ ಪ್ರಕೃತಿಯನ್ನು ಮೈದುಂಬಿಕೊಂಡು ಕಂಗೊಳಿಸುತ್ತಿದೆ ಎಂದು ತಿಳಿಸಿದರು.

Bhadra Wildlife Sanctuary: ಭದ್ರಾ ಅಭಯಾರಣ್ಯದಲ್ಲಿ ಪ್ರವಾಸಿಗರ ದಟ್ಟಣೆ ತಡೆಯಿರಿ

ಚಾರಣದ ಮೂಲಕ ವೃತ್ತಿ ಬದುಕಿನ ಒತ್ತಡ ಕಡಿಮೆ: 
ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಎಂ.ಆರ್.ಲೋಹಿತ್ ಮಾತನಾಡಿ ಜಿಲ್ಲೆಯು ಹಲವಾರು ಪ್ರಕೃತಿ ಸೌಂದರ್ಯವನ್ನು ಒಳಗೊಂಡಿದೆ. ಸುತ್ತಮುತ್ತಲು ಹಚ್ಚ ಹಸಿರಿನಿಂದ ಕೂಡಿರುವ ಪ್ರರ್ವತಶ್ರೇಣಿಗಳು ಚಾರಣ ಪ್ರಿಯರಿಗೆ ಅತ್ಯಂತ ಪ್ರಿಯವಾಗಲಿದ್ದು ನೌಕರರು ಅಥವಾ ಪ್ರವಾಸಿ ಗರು ವಾಹನಗಳ ಮೂಲಕ ಸಂಚರಿಸುವ ಬದಲು ಚಾರಣ ಮೂಲಕ ತೆರಳಿದರೆ ಗಿರಿಶ್ರೇಣಿಯ ಸೌಂದರ್ಯದ ನಡುವೆ ವೃತ್ತಿ ಬದುಕಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹದು ಎಂದರು.

ಚಿಕ್ಕಮಗಳೂರು: ಸಾವಿರಾರು ಜನ ಇರುಮುಡಿ ಹೊತ್ತು ದೇವಸ್ಥಾನಕ್ಕೆ ತೆರಳಿದ ಭಕ್ತರು..!

ಚಾರಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ತಿಂಗಳಿಗೆ ಒಮ್ಮೆಯಾದರೂ ಗಿರಿಶ್ರೇಣಿಗಳಲ್ಲಿ ಕಾಲ್ನಡಿಗೆ ಚಾರಣವನ್ನು ಹಮ್ಮಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ|| ಮೋಹನ್ಕುಮಾರ್, ಜಿಲ್ಲಾ ಪಂಚಾಯಿತಿ ಅಧಿಕಾರಿ ಸೋಮಶೇಖರ್, ಭದ್ರಾ ವನ್ಯಜೀವಿ ವಿಭಾಗದ ಎಸಿಎಫ್ ಮೋಹನ್, ಪತ್ರಕರ್ತ ಜಿ.ಎಂ.ರಾಜಶೇಖರ್, ಅರಣ್ಯ ಇಲಾಖೆಯ ನವೀನ್, ಪ್ರವಾಸೋದ್ಯಮ ಅಧಿಕಾರಿ ನಾಗರಾಜ್ ಸೇರಿದಂತೆ ಅನೇಕ ಮಂದಿ ಸರ್ಕಾರಿ ನೌಕರರು ಚಾರಣದಲ್ಲಿ ಪಾಲ್ಗೊಂಡಿದ್ದರು.

Follow Us:
Download App:
  • android
  • ios