ಸಿಲಿಂಡರ್ ಬಾಡಿಗೆ ಕೇಳಂಗಿಲ್ಲ. ವಾಹನಗಳಲ್ಲಿ ಸಿಲಿಂಡರ್ಗಳನ್ನು ಮನೆ ಮನೆಗೆ ತಂದು ಹಾಕುವವರು ಬಾಡಿಗೆ ಕೇಳಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಹಾಸನ (ಮಾ.03): ಮನೆ ಮನೆಗೆ ಸಿಲಿಂಡರ್ನ್ನು ವಾಹನದಲ್ಲಿ ತಂದು ವಿತರಣೆ ಮಾಡುವವರೇನಾದರು ಸಾಗಾಟದ ವೆಚ್ಚ ಕೇಳಿದರೆ ಕೊಡಬೇಡಿ. ಬಲವಂತವಾಗಿ ಯಾರಾದರೂ ಕೇಳಿದರೆ ಅವರ ವಿರುದ್ಧ ದೂರು ಕೊಟ್ಟಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಆರ್.ಗಿರೀಶ್ ಎಚ್ಚರಿಕೆ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗ್ಯಾಸ್ ಶಾಕ್ ಮೇಲೆ ಶಾಕ್: ಐದೇ ದಿನದಲ್ಲಿ 50 ರೂ. ಏರಿಕೆ!
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿಲಿಂಡರ್ ಯಾವುದೇ ಕಂಪನಿಯದಾಗಿರಲಿ ಸಾರ್ವಜನಿಕರು ಬುಕ್ ಮಾಡಿದಾಗ ಮನೆಗೆ ತಲುಪಿಸುವ ಜವಬ್ದಾರಿ ಆಯಾ ಏಜೆನ್ಸಿಯದ್ದು.
ತಲುಪಿಸುವವರಿಗೆ ಸೂಕ್ತ ಸಂಭಾವನೆ ಕೂಡ ಸಿಗುವುದರಿಂದ ಗ್ರಾಹಕರು ಹೆಚ್ಚುವರಿ ಹಣ ಕೊಡುವ ಅಗತ್ಯತೆ ಇರುವುದಿಲ್ಲ. ಬಾಡಿಗೆ ಕೊಡುವಂತೆ ಬಲವಂತವಾಗಿ ಹಣ ವಸೂಲಿ ಮಾಡಲು ಮುಂದಾದರೆ ಅವರ ವಿರುದ್ಧ ದೂರು ನೀಡುವುದನ್ನು ಮರೆಯಬೇಡಿ ಎಂದು ಸಲಹೆ ನೀಡಿದರು.
