ತುಮಕೂರು ಪ್ರಸಿದ್ಧ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ತುಮಕೂರು (ಅ.18):  ಕೊರೋನಾದಿಂದ ಮೃತಪಟ್ಟಮಠದ ಭಕ್ತ ಭೂಮಿ ಬಳಗದ ಸೋಮಣ್ಣ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕ್ವಾರಂಟೈನ್‌ ಆಗಿದ್ದಾರೆ. 

Add Asianetnews Kannada as a Preferred SourcegooglePreferred

ಅಕ್ಟೋಬರ್‌ 15 ರಂದು ಕೊರೋನಾದಿಂದ ಮೃತಪಟ್ಟಿದ್ದ ಸೋಮಣ್ಣ ಅವರ ಅಂತ್ಯಕ್ರಿಯೆ ಮಠದ ಆವರಣದಲ್ಲಿ ನಡೆಯಿತು.

ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಸೋಮಣ್ಣ ಅವರ ಅಂತ್ಯಕ್ರಿಯೆಯಲ್ಲಿ ತಾವು ಭಾಗವಹಿಸಿದ್ದು ಸರ್ಕಾರದ ಮಾರ್ಗಸೂಚಿ ಪ್ರಕಾರ ಕ್ವಾರಂಟೈನ್‌ನಲ್ಲಿ ಇರುವುದಕ್ಕೆ ತೀರ್ಮಾನಿಸಿರುವುದಾಗಿ ಹೇಳಿದ್ದಾರೆ. 

ಧಾರವಾಡ: 107 ವರ್ಷದ ಜಾತ್ರೆಗೆ ಮಹಾಮಾರಿ ಕೊರೋನಾ ಬ್ರೇಕ್

ಸಾರ್ವಜನಿಕ ಸಮಾರಂಭ ಹಾಗೂ ಪೂಜಾದಿ ಕಾರ್ಯಗಳಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದು ಭಕ್ತಾದಿಗಳು ಈ ಬಗ್ಗೆ ಯಾವುದೇ ಗೊಂದಲಕ್ಕೆ ಒಳಗಾಗಬಾರದೆಂದು ಅವರು ಮನವಿ ಮಾಡಿದ್ದಾರೆ.