ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ನಡೆದ ಘಟನೆ| ಮನೆಯ ಪಕ್ಕದ ಚಿಕ್ಕಪ್ಪನ ಜಮೀನಿನಲ್ಲಿ ಆಟವಾಡುತ್ತಾ ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾದ ಮಕ್ಕಳು| ಈ ಸಂಬಂಧ ಕೊಲ್ಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಕೊಲ್ಹಾರ(ಫೆ.13): ಆಟವಾಡುತ್ತಾ ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. 

Add Asianetnews Kannada as a Preferred SourcegooglePreferred

ಚಿಕ್ಕಆಸಂಗಿ ಗ್ರಾಮದ ಆಕಾಶ ಮಹಾದೇವ ಬೆನ್ನೂರ (4), ಬೋರಮ್ಮ ಸಂಗಣ್ಣ ಬೆನ್ನೂರ (4) ಮೃತಪಟ್ಟ ಮಕ್ಕಳು. ಇವರಿಬ್ಬರೂ ಮನೆಯ ಪಕ್ಕದ ಚಿಕ್ಕಪ್ಪನ ಜಮೀನಿನಲ್ಲಿ ಆಟವಾಡುತ್ತಾ ಹೋಗಿ ಅಲ್ಲಿರುವ ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾಗಿದ್ದಾರೆ. 

ನೋಟಿಸ್‌ಗೆ ಡೋಂಟ್ ಕೇರ್: ಮತ್ತೆ ಬಿಎಸ್‌ವೈ ವಿರುದ್ಧ ತಿರುಗಿಬಿದ್ದ ಯತ್ನಾಳ್

ಘಟನಾ ಸ್ಥಳಕ್ಕೆ ಕೊಲ್ಹಾರ ಪಿಎಸ್‌ಐ ಸಿದ್ದಪ್ಪ ಯಡಹಳ್ಳಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಕೊಲ್ಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.