ಹುಲಕೋಟಿ ರೂರಲ್‌ ಎಂಜಿನಿಯರಿಂಗ್‌ ಕಾಲೇಜ್‌ ಬಳಿ ನಡೆದ ಅಪಘಾತ| ಗಾಯಾಳಿಗಳಿಗೆ ಗದಗ ಜಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗದಗ ಗ್ರಾಮೀಣ ಪೊಲೀಸರು| 

ಗದಗ(ಫೆ.18): ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 

Add Asianetnews Kannada as a Preferred SourcegooglePreferred

ತಾಲೂಕಿನ ಹುಲಕೋಟಿ ಹೊರವಲಯದಲ್ಲಿರುವ ಹುಲಕೋಟಿ ರೂರಲ್‌ ಎಂಜಿನಿಯರಿಂಗ್‌ ಕಾಲೇಜ್‌ ಬಳಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಪ್ರೇಮಾ ಈಶ್ವರಗೌಡ ಪಾಟೀಲ, ಕಾರು ಚಾಲಕ ಅನ್ವರ್‌ ಮೃತಪಟ್ಟಿದ್ದಾರೆ. ಈಶ್ವರಗೌಡ ಪಾಟೀಲ, ಶಿವಾಬಾಯಿ ಪಾಟೀಲ, ಮಹಾರಾಜ ಪಾಟೀಲ ಈ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಗದಗ ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 

ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರಲ್ಲಿ ಶೇ.70 ರಷ್ಟು ಯುವಜನಾಂಗ; ಬೆಚ್ಚಿ ಬೀಳಿಸುತ್ತಿದೆ ವರದಿ!

ಮೂಲತಃ ರೋಣ ತಾಲೂಕಿನ ಮಾಳವಾಡ ಗ್ರಾಮದವರಾದ ಇವರು ಧಾರವಾಡದಲ್ಲಿ ನೆಲೆಸಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.