ವಿದ್ಯುತ್‌ ಬೇಲಿಯ ತಂತಿ ತಗುಲಿ ಇಬ್ಬರು ರೈತರು ಸ್ಥಳದಲ್ಲೇ ಸಾವು| ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ನಿಂಬರಗಾ ಠಾಣೆಯಲ್ಲಿ ಪ್ರಕರಣ ದಾಖಲು|  

ಆಳಂದ(ಸೆ.03): ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತಾಗಿ ವಿದ್ಯುತ್‌ ಬೇಲಿಯ ತಂತಿ ತಗುಲಿ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಗ್ರಾಮದ ರೈತ ಸಿದ್ಧರಾಮ ಪೂಜಾರಿ(58), ಅಮೃತರಾಯ ಚಿಂಚೋಳಿ(55) ಮೃತಪಟ್ಟವರು. ಕುಲಾಲಿ ರಸ್ತೆಯಲ್ಲಿರುವ ಸಿದ್ಧರಾಮ ಪೂಜಾರಿ ಎಂಬುವರಿಗೆ ಸೇರಿದ ಹೊಲಕ್ಕೆ ಅಮೃತನೊಂದಿಗೆ ಹೋಗಿದ್ದರು. ಹಂದಿಗಳ ಕಾಟ ತಡೆಯಲೆಂದು ಕಬ್ಬಿನ ಗದ್ದೆಯ ಸುತ್ತಲೂ ವಿದ್ಯುತ್‌ ಬೇಲಿ ಹಾಕಿದ್ದರು. ಈ ಬೇಳೆ ಗದ್ದೆಯ ಬಂದಾರಿನಲ್ಲಿ ಕೊಡಿಗೋಲು ಹಿಡಿದ ಇಬ್ಬರು ಕೆಲಸಕ್ಕೆ ಮುಂದಾಗಿದ್ದಾಗ ವಿದ್ಯುತ್‌ ತಂತಿ ತಗುಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಕಲಬುರಗಿ ಶಾಕಿಂಗ್; ಬಾವಿಯಲ್ಲಿ ಮಹಿಳಾ ಹೆಡ್ ಕಾನ್ಸ್ಟೇಬಲ್ ಶವ ಪತ್ತೆ

ಈ ಕುರಿತು ಘಟನಾ ಸ್ಥಳಕ್ಕೆ ನಿಂಬರಗಾ ಪೊಲೀಸ್‌ ಠಾಣೆಯ ಪಿಎಸ್‌ಐ ಸುರೇಶ ಕುಮಾರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಈ ಕುರಿತು ನಿಂಬರಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.