Asianet Suvarna News Asianet Suvarna News

ರಾಯಚೂರು: ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರ ದುರ್ಮರಣ

*   ರಾಯಚೂರು ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ನಡೆದ ಘಟನೆ
*   ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು
*   ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Two Killed in Bike Accident at Raichur grg
Author
Bengaluru, First Published Oct 15, 2021, 12:09 PM IST

ರಾಯಚೂರು(ಅ.15):  ರಾಜ್ಯದಲ್ಲಿ ದಸರಾ(Dasara) ಹಬ್ಬದ ಸಂಭ್ರಮದ ಮಧ್ಯೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹೌದು, ಬೈಕ್(Bike) ಸ್ಕಿಡ್ ಆಗಿ ಬಿದ್ದು ಇಬ್ಬರು ಮೃತಪಟ್ಟ(Death) ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಇಂದು(ಶುಕ್ರವಾರ) ನಡೆದಿದೆ.  ಅಪಘಾತದಲ್ಲಿ(Accident) ದೀಪಕ್ (22) , ಹುಸೇನ್ (23) ಎಂಬುವರೇ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. 

ಮೃತರು ರಾಯಚೂರು(Raichur) ನಗರದ ತಿಮ್ಮಪೂರ ಪೇಟೆ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.  ಅಣ್ಣನನ್ನ ಬೈಕ್‌ನಲ್ಲಿ ಕರೆದುಕೊಂಡು ಬರಲು ಹೋದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. 

ಆಂಬುಲೆನ್ಸ್ ಏರುವಾಗ ಗಾಯಾಳು, ಶಿವಮೊಗ್ಗಕ್ಕೆ ಬಂದಾಗ ಸದ್ದಿಲ್ಲದೆ 3 ಜನ ಜೂಟ್!

ಘಟನಾ ಸ್ಥಳಕ್ಕೆ ಯರಗೇರಾ ಠಾಣೆಯ ಪೊಲೀಸರು(Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹಗಳನ್ನ(Deadbody) ರಾಯಚೂರಿನ ರಿಮ್ಸ್(RIMS) ಆಸ್ಪತ್ರೆಗೆ ‌ರವಾನೆ ಮಾಡಲಾಗಿದೆ. ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow Us:
Download App:
  • android
  • ios