ಮೃತರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಡ್ರಕಲ್ ಗ್ರಾಮದವರು ಎಂದು ತಿಳಿದು ಬಂದಿದೆ. ಮೃತ ಬೈಕ್‌ ಸವಾರರು ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿಕೊಂಡು ಮರಳಿ ಗ್ರಾಮಕ್ಕೆ ತರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 

ಕೊಪ್ಪಳ(ಆ.01): ಬೈಕ್‌ಗೆ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಉಪಲಾಪೂರ ಗ್ರಾಮದ ಬಳಿ ಇಂದು(ಮಂಗಳವಾರ) ನಡೆದಿದೆ. ಮೃತ ಬೈಕ್ ಸವಾರರನ್ನ ಶರಣಪ್ಪ, ಕಾಳಪ್ಪ ಎಂದು ಗುರುತಿಸಲಾಗಿದೆ. 

Add Asianetnews Kannada as a Preferred SourcegooglePreferred

ಮೃತರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಡ್ರಕಲ್ ಗ್ರಾಮದವರು ಎಂದು ತಿಳಿದು ಬಂದಿದೆ. ಮೃತ ಬೈಕ್‌ ಸವಾರರು ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿಕೊಂಡು ಮರಳಿ ಗ್ರಾಮಕ್ಕೆ ತರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ- ವಿದ್ಯುತ್‌ ಸ್ಪರ್ಶದಿಂದ ಇಬ್ಬರು ಸಾವು, ನಾಲ್ವರಿಗೆ ಗಾಯ

ಎದುರಿಗೆ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೊಪ್ಪಳ‌ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.