*  ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಬಳಿ ನಡೆದ ಘಟನೆ*  ಮಂತ್ರಾಲಯಕ್ಕೆ ತೆರಳಿದ್ದ ಜೋಡಿ *  ಈ ಘಟನೆಯಿಂದ ಇಡೀ ಗ್ರಾಮವೇ ಕಣ್ಣಿರಿಟ್ಟಿದೆ 

ಬಳ್ಳಾರಿ(ಸೆ.10): ಮದುವೆಯಾಗಬೇಕಿದ್ದ ಜೋಡಿ ಅಪಘಾತಕ್ಕೀಡಾದ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಬಳಿ ನಿನ್ನೆ(ಗುರುವಾರ) ನಡೆದಿದೆ. ವಿನಯ್ (28) ಹಾಗೂ ಸೌಜನ್ಯ(‌24) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ವಾರವಷ್ಟೇ ಕುರುಗೋಡು ನಿವಾಸಿ ವಿನಯ್ ಹಾಗೂ ವೀರಾಪುರದ ಸೌಜನ್ಯ ಅವರ ನಿಶ್ಚಿತಾರ್ಥವಾಗಿತ್ತು. ನಿನ್ನೆ ಮಂತ್ರಾಲಯಕ್ಕೆ ತೆರಳಿದ್ದ ಜೋಡಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. 

7 ಜೀವ ಬಲಿಪಡೆದ ಅಪಘಾತ..ಪೊಲೀಸರ ಎಚ್ಚರಿಕೆ ಮಾತು ಕೇಳಲಿಲ್ಲ!

ರಾರಾವಿ ಬಳಿ ರೋಡ್ ಡಿವೈಡರ್‌ಗೆ ಕಾರ್ ಡಿಕ್ಕಿ ಹೊಡೆದು ಪರಿಣಾಮ ವಿನಯ್ ಹಾಗೂ ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಇಡೀ ಗ್ರಾಮವೇ ಕಣ್ಣಿರಿಟ್ಟಿದೆ.