* ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ನಡೆದ ಘಟನೆ* ಸ್ಥಳದಲ್ಲಿಯೇ ವಾಹನ ಬಿಟ್ಟು ಪರಾರಿಯಾದ ಬುಲೆರೋ ಚಾಲಕ * ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ವಿಜಯಪುರ(ಜೂ.22): ಬುಲೆರೋ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಸಾವನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ.
Add Asianetnews Kannada as a Preferred Source

ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರದೀಪ ಭೀಮು ರಾಠೋಡ (17) ಹಾಗೂ ಅನೀಲ ಚಿನ್ನು ರಾಠೋಡ (17) ಮೃತ ದುರ್ದೈವಿಗಳು. ವಿಜಯಪುರದಿಂದ ದೇವರಹಿಪ್ಪರಗಿ ಮಾರ್ಗವಾಗಿ ಹಿಟ್ನಳ್ಳಿ ತಾಂಡಾಕ್ಕೆ ಶಾಲಾ ದಾಖಲಾತಿಗಾಗಿ ಹೋಗಿ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
Tumakuruನಲ್ಲಿ ಕಾರು - ಸರಕಾರಿ ಬಸ್ ಭೀಕರ ಅಪಘಾತ, ಇಬ್ಬರು ಬಲಿ
ಬುಲೆರೋ ಚಾಲಕ ಸ್ಥಳದಲ್ಲಿಯೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
