* ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೊರಬ ಕ್ರಾಸ್ ಬಳಿ ನಡೆದ ಘಟನೆ* ಮಂಡ್ಯಕ್ಕೆ ಕಬ್ಬು ಕಟಾವಿಗೆ ಗುಳೆ ಹೊರಟಿದ್ದ ಇಬ್ಬರ ಸಾವು* ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ವಿಜಯನಗರ(ಜು.18): ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೊರಬ ಕ್ರಾಸ್ ಬಳಿ ಇಂದು(ಭಾನುವಾರ) ನಡೆದಿದೆ.
Add Asianetnews Kannada as a Preferred Source

ಮೃತರನ್ನ ಶಂಕರ್ ನಾಯ್ಕ್(30), ಪೀಕ್ಯಾನಾಯ್ಕ್(50) ಎಂದು ಗುರುತಿಸಲಾಗಿದೆ. ಇವರು ಬೈಕ್ ಮೇಲೆ ಮಂಡ್ಯದ ಕಡೆ ಗುಳೆ ಹೊರಟಿದ್ದರು ಎಂದು ತಿಳಿದು ಬಂದಿದೆ.
ವಿಜಯಪುರ; ಭೀಕರ ಅಪಘಾತ, ಸ್ಥಳದಲ್ಲೇ ಮೂವರ ಸಾವು
ಮೃತರು ವಿಜಯನಗರ ಕೂಡ್ಲಿಗಿಯ ಗೋವಿಂದಗಿರಿ ತಾಂಡಾದಿಂದ ಮಂಡ್ಯಕ್ಕೆ ಕಬ್ಬು ಕಟಾವಿಗೆ ಗುಳೆ ಹೊರಟಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
