ಕೂಲಿ ಕೆಲಸ ಮುಗಿಸಿಕೊಂಡು ವಾಪಸ್ ಬರುವಾಗ ನಡೆದ ದುರ್ಘಟನೆ| ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದ ಅಪಘಾತ| ಗಾಯಾಳುಗಳು ಲಕ್ಷ್ಮೇಶ್ವರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು|
ಗದಗ(ಫೆ.25): ಟ್ರ್ಯಾಕ್ಟರ್ವೊಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಏಳು ಜನರಿಗೆ ಗಾಯಗಳಾದ ಘಟನೆ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ಇಂದು(ಗುರುವಾರ) ನಡೆದಿದೆ.
Add Asianetnews Kannada as a Preferred Source

ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ ಹಿತ್ತಲಮನಿ(30) ಹಾಗೂ ಸೋಮವ್ವಾ ಅಡುಗೆಮನಿ(48) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರಲ್ಲಿ ಶೇ.70 ರಷ್ಟು ಯುವಜನಾಂಗ; ಬೆಚ್ಚಿ ಬೀಳಿಸುತ್ತಿದೆ ವರದಿ!
ಕೂಲಿ ಕೆಲಸ ಮುಗಿಸಿಕೊಂಡು ವಾಪಸ್ ಬರುವಾಗ ಟ್ರ್ಯಾಕ್ಟರ್ ಪಲ್ಟಿಯಾದ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನ ಲಕ್ಷ್ಮೇಶ್ವರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
