ಹಿಂದಿನಿಂದ ಬಂದ ಬಸ್ ಡಿಕ್ಕಿ, ಇಬ್ಬರ ಸಾವು| ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ನಡೆದ ಘಟನೆ| ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು| ಬಸ್ ಚಾಲಕನ ಬಂಧನ|
ಜಮಖಂಡಿ(ಅ.07): ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣ ಸಮೀಪದ ಹೊರವಲಯದಲ್ಲಿ ಮಂಗಳವಾರ ನಡೆದಿದೆ.
Add Asianetnews Kannada as a Preferred Source

ಜಮಖಂಡಿ ತಾಲೂಕಿನ ಕಡಪಟ್ಟಿ ಗ್ರಾಮದ ಬಸಪ್ಪ ಶಿವಸಂಗಪ್ಪ ಧಾರಣಿ (42), ಬೀಳಗಿ ತಾಲೂಕಿನ ಯತನಟ್ಟಿ ಗ್ರಾಮದ ಮಹಿಳೆ ಮಂಜವ್ವ ಯಲ್ಲಪ್ಪ ಮದರ (33) ಮೃತ ದುರ್ದೈವಿಗಳು.
ಮುಧೋಳದಲ್ಲಿ ಪ್ರೇಮಿಗಳು ನೇಣಿಗೆ ಶರಣು: ಕಾರಣ..?
ಮೃತರು ಜಮಖಂಡಿ ತಾಲೂಕಿನ ಕೊಣ್ಣೂರು ಗ್ರಾಮಕ್ಕೆ ಬೈಕ್ನಲ್ಲಿ ಸಾಗುತ್ತಿದ್ದ ವೇಳೆ ಇಲ್ಲಿನ ಹೊರವಲಯದ ಮುಧೋಳ ರಸ್ತೆಯ ಅಡಿಗಲ್ ಪೀರ್ ದರ್ಗಾ ಬಳಿ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಜಮಖಂಡಿ ಗ್ರಾಮೀಣ ಪೋಲೀಸ್ ಠಾಣೆ ಎಸೈ ಬಸವರಾಜ ಅವಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಬಸ್ ಚಾಲಕನನ್ನು ಬಂಧಿಸಲಾಗಿದೆ.
