ಬೈಕ್-ಲಾರಿ ನಡುವೆ ಅಪಘಾತ: ಇಬ್ಬರ ಸಾವು| ಕೊಪ್ಪಳ ತಾಲೂಕಿನ ಕೋಳೂರು ಕ್ರಾಸ್ ಬಳಿ ನಡೆದ ಘಟನೆ| ಜಾತ್ರೆಗೆಂದು ಕುಕನೂರಿನಿಂದ ಕೊಪ್ಪಳಕ್ಕೆ ಆಗಮಿಸಿದ್ದ ಯುವಕರು| ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು|
ಕೊಪ್ಪಳ(ಫೆ.01): ತಾಲೂಕಿನ ಕೋಳೂರು ಕ್ರಾಸ್ ಬಳಿ ಲಾರಿ-ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕುಕನೂರು ಪಟ್ಟಣದ ಗಣೇಶ (21) ಹಾಗೂ ರಾಧಿಕಾ (19) ಎಂದು ಗುರುತಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇವರು ಜಾತ್ರೆಗೆಂದು ಕೊಪ್ಪಳಕ್ಕೆ ಆಗಮಿಸಿದ್ದರು. ಆದರೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹೊಸಪೇಟೆ: ಬೈಕ್ನಿಂದ ಬಿದ್ದು ಕೊಪ್ಪಳದ ಯುವಕರಿಬ್ಬರ ದುರ್ಮರಣ
ದುರ್ಘಟನೆ ನಡೆದ ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
