ಬೈಕ್-ಲಾರಿ ನಡುವೆ ಅಪಘಾತ: ಇಬ್ಬರ ಸಾವು| ಕೊಪ್ಪಳ ತಾಲೂಕಿನ ಕೋಳೂರು ಕ್ರಾಸ್ ಬಳಿ ನಡೆದ ಘಟನೆ| ಜಾತ್ರೆಗೆಂದು ಕುಕನೂರಿನಿಂದ ಕೊಪ್ಪಳಕ್ಕೆ ಆಗಮಿಸಿದ್ದ ಯುವಕರು| ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು|
ಕೊಪ್ಪಳ(ಫೆ.01): ತಾಲೂಕಿನ ಕೋಳೂರು ಕ್ರಾಸ್ ಬಳಿ ಲಾರಿ-ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕುಕನೂರು ಪಟ್ಟಣದ ಗಣೇಶ (21) ಹಾಗೂ ರಾಧಿಕಾ (19) ಎಂದು ಗುರುತಿಸಲಾಗಿದೆ.
Add Asianetnews Kannada as a Preferred Source

ಇವರು ಜಾತ್ರೆಗೆಂದು ಕೊಪ್ಪಳಕ್ಕೆ ಆಗಮಿಸಿದ್ದರು. ಆದರೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹೊಸಪೇಟೆ: ಬೈಕ್ನಿಂದ ಬಿದ್ದು ಕೊಪ್ಪಳದ ಯುವಕರಿಬ್ಬರ ದುರ್ಮರಣ
ದುರ್ಘಟನೆ ನಡೆದ ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
