ಗ್ರಾಮಸ್ಥರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶವಗಳನ್ನ ಹೊರತೆಗೆದಿದ್ದಾರೆ.  ಶವ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ತುಮಕೂರು(ನ.01): ಬಾವಿಯಲ್ಲಿ ಈಜಾಡಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಬೆಳಗುಂಬ ಬಳಿ ಇಂದು(ಶುಕ್ರವಾರ) ನಡೆದಿದೆ. ಯಶವಂತ (17), ಮೊಹಮ್ಮದ್ ಸುಹೇಲ್ (17) ಸಾವನ್ನಪ್ಪಿದ ಯುವಕರು.

Add Asianetnews Kannada as a Preferred SourcegooglePreferred

ತುಮಕೂರು ಹೊರವಲಯದ ಬೆಳಗುಂಬ ತಾಂಡ್ಯದ ವಾಸಿ ಶ್ರೀನಿವಾಸ್‌ನ ಮಗ ಯಶವಂತ್ ಹಾಗೂ ವಡ್ಡರಹಳ್ಳಿ ಗ್ರಾಮದ ವಾಸಿ ಬಾಬಾ ಜಾನ್‌ನ ಮಗ ಮೊಹಮ್ಮದ್ ಸುಹೇಲ್ ಮಗ.

ಒಂದೊಂದೆ ಗ್ಯಾರಂಟಿ ವಾಪಸ್ ಪಡೆಯಲು ಕಾಂಗ್ರೆಸ್‌ ಪ್ಲ್ಯಾನ್‌: ಕೇಂದ್ರ ಸಚಿವ ಕುಮಾರಸ್ವಾಮಿ

ತುಮಕೂರು ಹೊರವಲಯದ ಬೆಳಗುಂಬ ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ಬಾವಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಗ್ರಾಮಸ್ಥರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶವಗಳನ್ನ ಹೊರತೆಗೆದಿದ್ದಾರೆ. ಶವ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.