ಪ್ರಧಾನಿ ಮೋದಿ ಹೇಳಿಕೆಯು ಮುಸ್ಲಿಂ ಸಮುದಾಯದಲ್ಲಿ ಆತ್ಮವಿಶ್ವಾಸ ಮತ್ತು ಭರವಸೆ ಮೂಡಿಸಿದೆ ಎಂದು ದ.ಕ.ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್‌ ಕಮಿಟಿ ತಿಳಿಸಿದೆ. ಕೇಂದ್ರದ ನಡೆಯನ್ನು ಮೆಚ್ಚಿ ಪ್ರಧಾನಿಗೆ ಪತ್ರ ಬರೆದಿದೆ. ಹಾಗಾದ್ರೆ ಮೋದಿ ಹೇಳಿದ್ದೇನು..? ಇಲ್ಲಿ ಓದಿ. 

ಮಂಗಳೂರು(ಏ.23): ಕೊರೋನಾ ವೈರಸ್‌ ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ತೆಗೆದುಕೊಂಡ ಕ್ರಮವನ್ನು ಶ್ಲಾಘಿಸಿರುವ ದ.ಕ.ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್‌ ಕಮಿಟಿ ಪ್ರಧಾನಿ ನರೇಂದ್ರ ಮೋದಿ, ಕೊರೋನಾ ರೋಗವು ಧರ್ಮ ಆಧಾರಿತವಲ್ಲ ಎಂದು ಹೇಳಿಕೆ ನೀಡಿರುವುದನ್ನು ಸ್ವಾಗತಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಬಗ್ಗೆ ಸೆಂಟ್ರಲ್‌ ಕಮಿಟಿ ಅಧ್ಯಕ್ಷ ಹಾಜಿ ಮುಹಮ್ಮದ್‌ ಮಸೂದ್‌, ಪ್ರಧಾನಿಗೆ ಪತ್ರ ಬರೆದು, ನೀವು ತೆಗೆದುಕೊಂಡ ನಿರ್ಧಾರಗಳಿಂದಾಗಿ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಕನಿಷ್ಠ ಮಟ್ಟದಲ್ಲಿದೆ.

ಗರ್ಭಿಣಿಯರಿಗೆ, 5 ವರ್ಷದೊಳಗಿನ ಮಕ್ಕಳಿಗೆ ಇಂದಿನಿಂದ ಚುಚ್ಚುಮದ್ದು

ಈ ನಡುವೆ, ಭಾರತದಲ್ಲಿ ವೈರಸ್‌ ಹರಡುವುದಕ್ಕೆ ಮುಸ್ಲಿಂ ಸಮುದಾಯವನ್ನು ದೂಷಿಸಲು ಪ್ರಯತ್ನಿಸುತ್ತಿರುವ ಕೆಲವು ದುರದೃಷ್ಟಕರ ಘಟನೆಗಳ ಬಗ್ಗೆ ತಾವು ಕೋವಿಡ್‌-19 ಮಹಾಮಾರಿ ಪ್ರತಿಯೊಬ್ಬರಿಗೂ ಸಮಾನವಾಗಿ ಬಾಧಿಸುತ್ತದೆ ಮತ್ತು ಈ ಸೋಂಕು ಹರಡುವಾಗ ಯಾವುದೇ ಜಾತಿ, ಮತ, ಧರ್ಮ, ಭಾಷೆ ಅಥವಾ ಗಡಿಯನ್ನು ನೋಡುವುದಿಲ್ಲ’ ಎಂಬ ಹೇಳಿಕೆಗೆ ನಾನು ಅಭಾರಿಯಾಗಿರುವೆ.

ವಿಶ್ವದ 108 ರಾಷ್ಟ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ನೆರವಿನ ಹಸ್ತ

ಈ ಹೇಳಿಕೆಯು ಮುಸ್ಲಿಂ ಸಮುದಾಯದಲ್ಲಿ ಆತ್ಮವಿಶ್ವಾಸ ಮತ್ತು ಭರವಸೆಯ ಭಾವವನ್ನು ಮೂಡಿಸಿದೆ. ನಿಮ್ಮ ನಾಯಕತ್ವದಲ್ಲಿ ನಾವು ಈ ಪರಿಸ್ಥಿತಿಯನ್ನು ಸಮರ್ಥವಾಗಿ ದಾಟಲಿದ್ದೇವೆ ಎಂಬ ಭರವಸೆಯನ್ನು ನಾನು ಹೊಂದಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.