ಉಡುಪಿಯ ಹಿರಿಯ ಸಾಮಾಜಿಕ ಸಾಂಸ್ಕೃತಿಕ ಸಂಘಟನೆಯಾದ ಯಕ್ಷಗಾನ ಕಲಾರಂಗವು ಇಲ್ಲಿಯ ತನಕ ಕಲಾವಿದರು ಹಾಗೂ ವಿದ್ಯಾರ್ಥಿಗಳಿಗಾಗಿ 37 ಮನೆಗಳನ್ನು ನಿರ್ಮಿಸಿದ್ದು,ಇದೀಗ ಈ ಮೇ ಒಳಗೆ ಮತ್ತೆ ಹದಿಮೂರು ಮನೆಗಳ ನಿರ್ಮಾಣಕಾರ್ಯ ಪೂರೈಸಲಿದೆ.

ಉಡುಪಿ (ಮಾ.13): ಉಡುಪಿಯ ಹಿರಿಯ ಸಾಮಾಜಿಕ ಸಾಂಸ್ಕೃತಿಕ ಸಂಘಟನೆಯಾದ ಯಕ್ಷಗಾನ ಕಲಾರಂಗವು ಇಲ್ಲಿಯ ತನಕ ಕಲಾವಿದರು ಹಾಗೂ ವಿದ್ಯಾರ್ಥಿಗಳಿಗಾಗಿ 37 ಮನೆಗಳನ್ನು ನಿರ್ಮಿಸಿದ್ದು,ಇದೀಗ ಈ ಮೇ ಒಳಗೆ ಮತ್ತೆ ಹದಿಮೂರು ಮನೆಗಳ ನಿರ್ಮಾಣಕಾರ್ಯ ಪೂರೈಸಲಿದೆ. ಈ ಪ್ರಯುಕ್ತ ಮನೆಗಳ ನಿರ್ಮಾಣ ಕಾರ್ಯಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು.

Add Asianetnews Kannada as a Preferred SourcegooglePreferred

ಪೇಜಾವರ ಶ್ರೀಗಳ ಷಷ್ಠ್ಯಬ್ಧದ ಪ್ರಥಮ ದಿನವಾಗಿದ್ದು(ಜನ್ಮ ನಕ್ಷತ್ರ ) ಈ ಹಿನ್ನೆಲೆಯಲ್ಲಿ ಮನೆ ನಿರ್ಮಾಣದ ಅಭಿಯಾನಕ್ಕೆ ಶ್ರೀ ಗಳೇ ಚಾಲನೆ ನೀಡಿದ್ದು ವಿಶೇಷವಾಗಿದೆ. ಉಡುಪಿ ಸಂತೆಕಟ್ಟೆಯಲ್ಲಿ ವಿದ್ಯಾಪೋಷಕ್ ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹರ್ಷಿತಾ ಶೆಟ್ಟಿಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಸಲಾಯಿತು.

ಮುಹೂರ್ತದ ಸಂದರ್ಭದಲ್ಲಿ ಶ್ರೀಗಳು ಮಾತನಾಡಿ ಶ್ರೀಕೃಷ್ಣನ ಉಪದೇಶವನ್ನು ತನ್ನ ಸಮಾಜಮುಖಿ ಕಾರ್ಯಚಟುವಟಿಕೆಯ ಮೂಲಕ ನಿರ್ವಹಿಸುತ್ತಿರುವ ವಿಶಿಷ್ಟ ಸಂಸ್ಥೆ ಯಕ್ಷಗಾನ ಕಲಾರಂಗ.ಈ ಸಂಸ್ಥೆಯಿಂದ ನಾವು ಪ್ರೇರಣೆಗೊಂಡಿದ್ದೇವೆ. ಮನೆ ಬೇಗನೆ ಪೂರ್ಣಗೊಂಡು,ಎಲ್ಲರಿಗೂ ಶ್ರೇಯಸ್ಸಾಗಲಿ ಎಂದು ಅನುಗ್ರಹಿಸಿದರು.

ವಿಶ್ವಪ್ರಸನ್ನ ತೀರ್ಥ ಶ್ರೀಪಾದರ 60 ನೇ ಜನ್ಮವರ್ಧಂತಿ, ನೂರಾರು ಭಕ್ತರು ಭಾಗಿ

ಆರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್ ಸ್ವಾಗತಿಸಿದರು.ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಸ್ತಾವನೆಯೊಂದಿಗೆ ನಿರೂಪಿಸಿದರು. ಎರಡು ತಿಂಗಳ ಹಿಂದೆ ಹರ್ಷಿತಾಳ ತಂದೆಗೆ ವಾಹನ ಅಪಘಾತವಾಗಿದ್ದು, ತಲೆಗೆ ಎರಡೆರಡು ಶಸ್ತ್ರ ಚಿಕಿತ್ಸೆಗಳಾಗಿ ಕುಟುಂಬ ತೀರಾ ಸಂಕಷ್ಟದಲ್ಲಿ ಇದ್ದುದನ್ನು ಗಮನಿಸಿ ಸಂಸ್ಥೆ ಸುಮಾರು 6 ಲಕ್ಷ ರೂ. ವೆಚ್ಚದ ಗೃಹ ನಿರ್ಮಾಣಕ್ಕೆ ಮುಂದಾಗಿದೆ.ಈ ಸಂದರ್ಭದಲ್ಲಿ ಹಿರಿಯರಾದ ಯು.ವಿಶ್ವನಾಥ ಶೆಣೈ, ರಾಜಗೋಪಾಲ ಆಚಾರ್ಯ, ನಾರಾಯಣ ಎಂ.ಹೆಗಡೆ, ಬಿ.ಭುವನ ಪ್ರಸಾದ ಹೆಗ್ಡೆ,ಹೆಚ್. ಏನ್.ಶೃಂಗೇಶ್ವರ, ಪೃಥ್ವಿರಾಜ್ ಕವತ್ತಾರ್,ಅಶೋಕ ಎಂ, ರಮಾನಾಥ ಶಾನಭಾಗ್, ಕಿಶೋರ್ ಸಿ.ಉದ್ಯಾವರ,ಸುದರ್ಶನ ಬಾಯಿರಿ ಉಪಸ್ಥಿತರಿದ್ದರು.

ವಿಶ್ವ ಗ್ಲುಕೋಮಾ ಸಪ್ತಾಹ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ದಲ್ಲಿ - ಜಾಗೃತಿ ಶಿಕ್ಷಣ ಮತ್ತು ಉಚಿತ ತಪಾಸಣಾ ಶಿಬಿರ

ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ 13 ಮನೆಗಳ ನಿರ್ಮಾಣ ಕಾರ್ಯ ಅಧ್ಯಕ್ಷರಾದ ಎಂ. ಗಂಗಾಧರ್ ರಾವ್ ಅವರ ನೇತೃತ್ವದಲ್ಲಿ ಆರಂಭಗೊಂಡಿದ್ದು, ಮೇ ಅಂತ್ಯದೊಳಗೆ ಪೂರ್ಣಗೊಳ್ಳಬೇಕಾಗಿದೆ. ಈ ಸಮಾಜಮುಖಿ ಕಾರ್ಯದಲ್ಲಿ ಕೈಜೋಡಿಸುವ ಆಸಕ್ತಿಯುಳ್ಳವರಿಗೆ ಅವಕಾಶವಿದೆ ಎಂದು ಸಂಸ್ಥೆ ತಿಳಿಸಿದೆ . ಪೇಜಾವರ ಶ್ರೀಗಳು ಪ್ರತಿ ವರ್ಷ ಒಂದು ಮನೆಯ ಪ್ರಾಯೋಜಕತ್ವವನ್ನ ವಹಿಸಿಕೊಂಡು ಹರಸುತ್ತಿರುವುದು ಗಮನಾರ್ಹವಾಗಿದೆ.