ಇದೀಗ ಪ್ರಸಿದ್ಧ ಕೊಲ್ಲೂರು ದೇಗಲದಲ್ಲಿಯೂ ಒಂದು ಗೊಂದಲ ಎದ್ದಿದೆ. ಹಲವು ರೀತಿಯ ಅಸಮಾಧಾನ ಭುಗಿಲೆದ್ದಿದೆ. 

ಉಡುಪಿ (ಅ.25) :  ಕೊಲ್ಲೂರು ದೇವಸ್ಥಾನ ದಲ್ಲಿ ರಥೋತ್ಸವ ಗೊಂದಲ ಉಂಟಾಗಿದೆ. ಪುಷ್ಪರಥದ ಬದಲು ಚಿನ್ನದ ರಥೋತ್ಸವ ಮಾಡಿದ್ದು ಗೊಂದಲಕ್ಕೆ ಕಾರಣವಾಗಿದೆ. 

Add Asianetnews Kannada as a Preferred SourcegooglePreferred

ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ಮಹಾನವಮಿ ಪ್ರಯುಕ್ತ ಶನಿವಾರ ರಾತ್ರಿ ನಡೆದ ಉತ್ಸವದಲ್ಲಿ ಸಂಪ್ರದಾಯದಂತೆ ಉತ್ಸವಕ್ಕೆ ಪುಷ್ಪರಥ ಸಜ್ಜು ಮಾಡಲಾಗಿತ್ತು. 

ಆದತರ ಶಾಸಕ ಸುಕುಮಾರ ಶೆಟ್ಟಿ ಆದೇಶದಂತೆ ನಡೆದ ಚಿನ್ನದ ರಥೋತ್ಸವ ಮಾಡಿ ಸಂಪ್ರದಾಯ ಉಲ್ಲಂಘನೆ ಮಾಡಲಾಗಿದೆ. ಈ ಬಗ್ಗೆ ಕೆಲವರಿಗೆ ಬೇಸರ ಉಂಟಾಗಿದೆ. 

ಕೊರೋನಾ ಭೀತಿ, ಕೊಲ್ಲೂರಿಗೆ ಬರ್ತಿಲ್ಲ ಕೇರಳದ ಭಕ್ತರು ..

ಸುಕುಮಾರ ಶೆಟ್ಟಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದು, ಅವರ ಕಾಲದಲ್ಲೇ ಚಿನ್ನದ ರಥ ದೇವಾಲಯಕ್ಕೆ ಅರ್ಪಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ ನಡೆಸಲು ಶಾಸಕರ ಸೂಚನೆ ನೀಡಿದ್ದರೆನ್ನಲಾಗಿದೆ.

ಸಂಪ್ರದಾಯ ಬದಲಾಯಿಸಿದ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದ್ದು, ಗೊಂದಲದ ನಡುವೆಯೂ ಸುಸೂತ್ರವಾಗಿ ಚಿನ್ನದ ರಥೋತ್ಸವ ನೆರವೇರಿದೆ.