'ಕೇಂದ್ರ ಸರ್ಕಾರದ್ದು ಸೇಡಿನ ರಾಜಕಾರಣ, ಇಡಿ ದುರ್ಬಳಕೆ': ಕಾಂಗ್ರೆಸ್ ಕಿಡಿ
ಕೇಂದ್ರ ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರ ಮೇಲೆ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ರಾಷ್ಟ್ರಾದ್ಯಂತ ಕಾಂಗ್ರೆಸ್ ನಾಯಕರು ಹಾಗೂ ಮುಖಂಡರರ ಮೇಲೆ ಸಿಬಿಐ, ಐಟಿ ಮತ್ತು ಇಡಿಯಂತಹ ಸಾಂವಿಧಾನಿಕ ಸಂಸ್ಥೆಗಳಿಂದ ದಾಳಿ ಮಾಡಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ಮಂಡ್ಯ(ಆ.31): ಕೇಂದ್ರ ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರ ಮೇಲೆ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಶುಕ್ರವಾರ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಾದ್ಯಂತ ಕಾಂಗ್ರೆಸ್ ನಾಯಕರು ಹಾಗೂ ಮುಖಂಡರರ ಮೇಲೆ ಸಿಬಿಐ, ಐಟಿ ಮತ್ತು ಇಡಿಯಂತಹ ಸಾಂವಿಧಾನಿಕ ಸಂಸ್ಥೆಗಳಿಂದ ದಾಳಿ ಮಾಡಿಸಿ ಕಾಂಗ್ರೆಸ್ ಪಕ್ಷ ಮತ್ತು ನಾಯಕರ ಮೇಲೆ ಕೆಟ್ಟಹೆಸರು ತರಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಡಿ ದುರುಪಯೋಗ:
ಡಿ.ಕೆ. ಶಿವಕುಮಾರ್ ರಾಜ್ಯದ ಕಾಂಗ್ರೆಸ್ನ ಪ್ರಭಾವಿ ಮುಖಂಡರಾಗಿದ್ದಾರೆ. ಕೇಂದ್ರ ಸರ್ಕಾರ ಇಡಿ ಇಲಾಖೆಯನ್ನು ಡಿಕೆಶಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಸಿಬಿಐ, ಐಟಿ ಮತ್ತು ಇಡಿಯಂತಹ ಸಾಂವಿಧಾನಿಕ ಸಂಸ್ಥೆಗಳಿಂದ ತಮ್ಮ ಪಕ್ಷಕ್ಕೆ ವಿರೋಧವಾಗಿ ನಡೆದುಕೊಳ್ಳುವವರನ್ನು ಮುಗಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.
ಗುಜರಾತ್ ರಾಜ್ಯದಲ್ಲಿ ಉಂಟಾಗಿದ್ದ ರಾಜಕೀಯ ಅಸ್ಥಿರತೆಯಿಂದ ಅಲ್ಲಿನ ಶಾಸಕರು ಕರ್ನಾಟಕಕ್ಕೆ ಪ್ರವಾಸಕ್ಕೆ ಬಂದಿದ್ದ ವೇಳೆ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ಸಾಕಷ್ಟುಭದ್ರತೆ ನೀಡಿದ್ದರು. ಈ ಬೆಳವಣಿಗೆಯ ನಂತರ ಡಿ.ಕೆ.ಶಿವಕುಮಾರ್ ಅವರ ಧಮನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ದೂರಿದರು.
ರಾಜಕೀಯ ಪ್ರೇರಿತ ದಾಳಿ:
ರಾಜಕೀಯ ಪ್ರೇರಿತವಾಗಿ ರೋಧಿಗಳ ಮೇಲೆ ದಬ್ಬಾಳಿಕೆ, ದೌರ್ಜನ್ಯ ಮಾಡುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ನೋಟಿಸ್ ನೀಡಿ ಅದಕ್ಕೆ ಸಮಜಾಯಿಸಿ ಪಡೆಯುವುದು, ತಪ್ಪಿದ್ದಲ್ಲಿ ದಂಡ ವಸೂಲಿ ಮಾಡುವುದು ಐಟಿ ಮತ್ತು ಇಡಿಯ ಕ್ರಮವಾಗಿದೆ. ಆದರೆ ಕೇಂದ್ರ ಸರ್ಕಾರ ಇಡಿಯನ್ನು ಬಿಟ್ಟು ಶಿವಕುಮಾರ್ ಅವರನ್ನು ಬಂಧನ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಕ್ರಮದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲಿ ಎಂದು ಎಚ್ಚರಿಸಿದರು.
ಮಂಡ್ಯ [ಆ.30] : ಕೆ.ಆರ್.ಪೇಟೆ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ ಮಂಡ್ಯ ಸಂಸದೆ ಸುಮಲತಾ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಜೆಡಿಎಸ್ ನಾಯಕರ ಬಗ್ಗೆ ಬೇಸರ ವ್ಯಕ್ತಪಡಿಸಿದ ನಾರಾಯಣ ಗೌಡ 1966ರ KR ಪೇಟೆ ಉಪ ಚುನಾವಣೆ ಸನ್ನಿವೇಶ ಪ್ರಸ್ತಾಪಿಸಿ ಅಸಮಾಧಾನ ಹೊರಹಾಕಿದ್ದಾರೆ.
1996 ರಲ್ಲಿ ಕೆ.ಆರ್ ಪೇಟೆ ಶಾಸಕರಾಗಿದ್ದ ಕೃಷ್ಣ ಅವರು ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆದಿತ್ತು.. ಆಗ ಜವರಾಯಿ ಗೌಡ ಎನ್ನುವವರಿಗೆ ದೇವೇಗೌಡರು ಟಿಕೆಟ್ ಕೊಟ್ಟಿದ್ದರು. ಇದರಿಂದ ಬಿ. ಪ್ರಕಾಶ್ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ಜವರಾಯಿ ಗೌಡ ಸೋತರು. ಇದರ ಹಿಂದೆ ಸೋಲಿಸುವ ಉದ್ದೇಶವಿತ್ತು.
ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸುದ್ಧಿಗೋಷ್ಠಿಯಲ್ಲಿ ಮಾಜಿ ಸಚಿವ ಎಂ.ಎಸ್. ಆತ್ಮಾನಂದ, ಎಂ.ಎಸ್ .ಚಿದಂಬರ್ , ಸಿ.ಎಂ.ದ್ಯಾವಪ್ಪ, ಹಾಲಹಳ್ಳಿ ರಾಮಲಿಂಗಯ್ಯ, ಸಿದ್ದರಾಮೇಗೌಡ, ಅಂಜನಾ ಶ್ರೀಕಾಂತ್, ಪಾಪಣ್ಣ ಇದ್ದರು.