‌ಚುಟುಕು ಕವಿ ಎಂದು ಪ್ರಸಿದ್ಧರಾದ ಡುಂಡಿರಾಜರು  ಉತ್ತಮವಾದ ಮತ್ತು ಮಾರ್ಮಿಕವಾದ ಕವನಗಳನ್ನೂ ಬರೆದಿದ್ದು,  ಮಾರ್ಪಳ್ಳಿಯವರು ಸ್ವತಃ ರಾಗಬದ್ಧವಾಗಿ ಹಾಡಿ ತೋರಿಸಿದರು. ಸಂಧ್ಯಾ ಶೆಣೈಯವರು ಕವಿಯೊಡನೆ ಮಾತುಕತೆ ಮಾಡುತ್ತಾ ಹಾಸ್ಯದ ಹೊನಲನ್ನು ಹರಿಸಿದರು .

ಉಡುಪಿ(ಏ.19): ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶಯದಲ್ಲಿ ಉಡುಪಿ ಬುಡ್ನಾರಿನಲ್ಲಿರುವ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ವಿನೂತನ ಪ್ರಯೋಗ "ಹಾಡು ಹರಟೆ" ನಡೆಯಿತು. ಪ್ರಸಿದ್ಧ ಕವಿ ಡುಂಡಿರಾಜ್, ಗಾಯಕ, ನಾಟಕ ನಿರ್ದೇಶಕ ಮತ್ತು ಸಂಗೀತಗಾರ ಗುರುರಾಜ ಮಾರ್ಪಳ್ಳಿ ಮತ್ತು ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ ಇವರ ಕೂಡುವಿಕೆಯಲ್ಲಿ ನಡೆದ ಕವಿಯ ಎದುರಲ್ಲೇ ಕವಿತಾ ವಾಚನದ ನೂತನ ಕಾರ್ಯಕ್ರಮ ನಡೆಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚುಟುಕು ಕವಿ ಎಂದು ಪ್ರಸಿದ್ಧರಾದ ಡುಂಡಿರಾಜರು ಉತ್ತಮವಾದ ಮತ್ತು ಮಾರ್ಮಿಕವಾದ ಕವನಗಳನ್ನೂ ಬರೆದಿದ್ದು, ಮಾರ್ಪಳ್ಳಿಯವರು ಸ್ವತಃ ರಾಗಬದ್ಧವಾಗಿ ಹಾಡಿ ತೋರಿಸಿದರು. ಸಂಧ್ಯಾ ಶೆಣೈಯವರು ಕವಿಯೊಡನೆ ಮಾತುಕತೆ ಮಾಡುತ್ತಾ ಹಾಸ್ಯದ ಹೊನಲನ್ನು ಹರಿಸಿದರು.

ಕೊನೆಗೂ ಖಚಿತವಾಯ್ತು.. ಕಾರ್ಕಳದ ಕೃಷ್ಣಶಿಲೆಯಲ್ಲಿ ನಿರ್ಮಾಣವಾಗಲಿದೆ ಅಯೋಧ್ಯೆ ರಾಮನ ಮೂರ್ತಿ!

ಹಾರ್ಮೋನಿಯಂನಲ್ಲಿ ಶಶಿಕಿರಣ್ ಮತ್ತು ತಬಲಾದಲ್ಲಿ ಕಾರ್ತಿಕ್ ಭಟ್ ಸಹಕರಿಸಿದರು .ಅದರ ಮೊದಲು ನಡೆದ ಸಭಾ ಕಾರ್ಯಕ್ರಮದಲ್ಲಿ ಡಾ. ಭಾರ್ಗವಿ ಐತಾಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಪೂರ್ಣಿಮಾ ಮುಖ್ಯ ಅತಿಥಿಯಾಗಿದ್ದರು . ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊ.ಶಂಕರ್, ಕಸಾಪದ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಎಚ್ ಪಿ, ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಮತ್ತಿತರು ಸಭೆಯಲ್ಲಿ ಉಪಸ್ಥಿತರಿದ್ದರು . ರಾಜೇಶ್ ಭಟ್ ಪಣಿಯಾಡಿ ನಿರೂಪಣೆ ಮಾಡಿ ಪೂರ್ಣಿಮಾ ಕೊಡವೂರು ಧನ್ಯವಾದ ಸಮರ್ಪಣೆ ಮಾಡಿದರು.