ಮಂಗಳೂರಿನಲ್ಲಿ ಈಗಷ್ಟೇ ಬಿಗುವಿನ ವಾತಾವರಣ ಸ್ವಲ್ಪಮಟ್ಟಿಗೆ ತಿಳಿಯಾಗುತ್ತಿದ್ದು, ನಿಷೇಧಾಜ್ಞೆ ಮುಂದುವರಿದಿದೆ. ಇದೇ ಸಂದರ್ಭ ಮುಂಜಾಗೃತಾ ಕ್ರಮಾವಾಗಿ ನಗರದೊಳಗೆ ಹೊರಭಾಗದ ವಾಹನಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಮಂಗಳೂರು(ಡಿ.23): ಮಂಗಳೂರಿನಲ್ಲಿ ಈಗಷ್ಟೇ ಬಿಗುವಿನ ವಾತಾವರಣ ಸ್ವಲ್ಪಮಟ್ಟಿಗೆ ತಿಳಿಯಾಗುತ್ತಿದ್ದು, ನಿಷೇಧಾಜ್ಞೆ ಮುಂದುವರಿದಿದೆ. ಇದೇ ಸಂದರ್ಭ ಮುಂಜಾಗೃತಾ ಕ್ರಮಾವಾಗಿ ನಗರದೊಳಗೆ ಹೊರಭಾಗದ ವಾಹನಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

Add Asianetnews Kannada as a Preferred SourcegooglePreferred

ಭಾನುವಾರ ಸಂಜೆ ಬಳಿಕ ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿದ್ದುದರಿಂದ ಮಂಗಳೂರು ನಗರಕ್ಕೆ ಹೊರಗಿನಿಂದ ಬರುವ ವಾಹನಗಳನ್ನು ನಿರ್ಬಂಧಿಸಲಾಗಿದೆ. ತುರ್ತು ಬರಬೇಕಾದ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಪೇಜಾವರ ಶ್ರೀ: 3 ದಿನಗಳಿಂದ ಪ್ರಜ್ಞೆ ಬಂದಿಲ್ಲ, ಕೃತಕ ಉಸಿರಾಟ ಮುಂದುವರಿಕೆ

ರಾಷ್ಟ್ರೀಯ ಹೆದ್ದಾರಿ 75ರ ಅರ್ಕುಳದಲ್ಲಿ ಖಾಸಗಿ ವಾಹನಗಳನ್ನು ನಗರ ಪ್ರವೇಶಿಸದಂತೆ ನಿರ್ಬಂಧಿಸಲಾಗುತ್ತಿತ್ತು. ಮನೆಗೆ ತೆರಳುವ ಸ್ಥಳೀಯರಿಗೆ ಅವಕಾಶ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಪೌರತ್ವ ತಿದ್ದುಪಡಿ ಕಾಯ್ದೆ: ಮಾಹಿತಿಗಾಗಿ ಮಂಗಳೂರಲ್ಲಿ ಹೆಲ್ಪ್‌ ಡೆಸ್ಕ್‌..!