Asianet Suvarna News Asianet Suvarna News

ಕಲಬುರಗಿ: ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್‌ಗೆ ಬಲಿ

* ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ಜಯತೀರ್ಥ ಕಾಗಲಕರ್ 
* ಮೂರು ದಶಕಗಳಿಂದ ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆದಿದ್ದ ಕಾಗಲಕರ್ 
* ಕಾಗಲಕರ್ ಅಗಲಿಕೆಗೆ ಕಂಬನಿ ಮಿಡಿದ ಸಂಸದರು, ಶಾಸಕರು ಹಾಗೂ ಪತ್ರಕರ್ತರು
 

Veteran Journalist Jayateertha Kagalkar Passed Away Due to Coronavirus in Kalaburagi grg
Author
Bengaluru, First Published May 13, 2021, 2:02 PM IST

ಕಲಬುರಗಿ(ಮೇ.13):  ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಮಹಾಮಾರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

Veteran Journalist Jayateertha Kagalkar Passed Away Due to Coronavirus in Kalaburagi grg

ವಾರದ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜಯತೀರ್ಥ ಕಾಗಲಕರ್ ಇಂದು(ಗುರುವಾರ) ಕೊನೆಯುಸಿರೆಳೆದರು.

"

ವಿಜಯಪುರ: ಬಿಎಲ್‌ಡಿಇ ವಿವಿ ಉಪಕುಲಪತಿ ಡಾ. ಬಿರಾದಾರ ಇನ್ನಿಲ್ಲ

ಜಯತೀರ್ಥ ಕಾಗಲಕರ್ ಅವರು ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾ  ಇತ್ತೀಚಿಗಷ್ಟೇ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.

Veteran Journalist Jayateertha Kagalkar Passed Away Due to Coronavirus in Kalaburagi grg

ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್ ಅವರ ಅಗಲುವಿಕೆಗೆ ಸಂಸದರು, ಶಾಸಕರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios