ಎರಡು, ಮೂರು ನಿಮಿಷಗಳವರೆಗೆ ಸುತ್ತೂರು ಶ್ರೀಕ್ಷೇತ್ರದ ಕುರಿತಾಗಿ ಕನ್ನಡದಲ್ಲಿಯೇ ಮಾತನಾಡಿದರು. ಬಳಿಕ ಇಂಗ್ಲಿಷ್‌ನಲ್ಲಿ ಮುಂದುವರೆಸಿದರು. 

ಮೈಸೂರು[ಆ.29]: ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಸುತ್ತೂರಿನಲ್ಲಿ ಮಂಗಳವಾರ ನಡೆದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ 103ನೇ ಜಯಂತಿ ಮಹೋತ್ಸವದಲ್ಲಿ ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. 

Add Asianetnews Kannada as a Preferred SourcegooglePreferred

ಅವರು ಎರಡು, ಮೂರು ನಿಮಿಷಗಳವರೆಗೆ ಸುತ್ತೂರು ಶ್ರೀಕ್ಷೇತ್ರದ ಕುರಿತಾಗಿ ಕನ್ನಡದಲ್ಲಿಯೇ ಮಾತನಾಡಿದರು. ಬಳಿಕ ಇಂಗ್ಲಿಷ್‌ನಲ್ಲಿ ಮುಂದುವರೆಸಿದರು. ನನಗೆ ಕನ್ನಡ ಮಾತನಾಡಲು ಬರುವುದಿಲ್ಲ, ಅರ್ಥವಾಗುತ್ತದೆ. ಆದ್ದರಿಂದ ಇಂಗ್ಲಿಷ್‌ನಲ್ಲಿ ಮಾತನಾಡುತ್ತೇನೆ ಎಂದರು. ನಡುವೆ ಹಿಂದಿಯನ್ನು ಬಳಸಿದರು. ವೆಂಕಯ್ಯ ನಾಯ್ಡು ಅವರು ಕರ್ನಾಟಕದಿಂದ 2 ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.