ಸೋಮವಾರವಷ್ಟೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿ ಕೋವಿಡ್ ಪರೀಕ್ಷೆಗೊಳಗಾಗಿದ್ದ ಹೊರಟ್ಟಿ| ವೈದ್ಯರ ಸಲಹೆ ಮೇರೆಗೆ ಹೊರಟ್ಟಿಗೆ ಕಿಮ್ಸ್ನಲ್ಲಿ ಚಿಕಿತ್ಸೆ| ಹೊರಟ್ಟಿ ಅವರ ಸಂಪರ್ಕಕ್ಕೆ ಬಂದಿರುವವರು ಪರೀಕ್ಷೆಗೊಳಗಾಗ ಬೇಕೆಂದು ತಿಳಿಸಿದ ಹೊರಟ್ಟಿ ಅವರ ಆಪ್ತ ಕಾರ್ಯದರ್ಶಿ ವಿಶ್ವನಾಥ|
ಹುಬ್ಬಳ್ಳಿ(ಏ.28): ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮಂಗಳವಾರ ಕೊರೋನಾ ದೃಢಪಟ್ಟಿದೆ.
Add Asianetnews Kannada as a Preferred Source

ಹೊರಟ್ಟಿ ಅವರು ಸೋಮವಾರವಷ್ಟೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿ ಕೋವಿಡ್ ಪರೀಕ್ಷೆಗೊಳಗಾಗಿದ್ದರು. ಮಂಗಳವಾರ ವರದಿ ಪಾಸಿಟಿವ್ ಎಂದು ಬಂದಿದೆ. ವೈದ್ಯರ ಸಲಹೆ ಮೇರೆಗೆ ಅವರನ್ನು ಕಿಮ್ಸ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯವಾಗಿದ್ದಾರೆ.
ಒಂದೇ ಬೆಡ್ನಲ್ಲಿ ಇಬ್ಬರಿಗೆ ಚಿಕಿತ್ಸೆ : ವೈರಲ್
ಅವರ ಸಂಪರ್ಕಕ್ಕೆ ಬಂದಿರುವವರು ಪರೀಕ್ಷೆಗೊಳಗಾಗ ಬೇಕೆಂದು ಬಸವರಾಜ ಹೊರಟ್ಟಿ ಅವರ ಆಪ್ತ ಕಾರ್ಯದರ್ಶಿ ವಿಶ್ವನಾಥ ತಿಳಿಸಿದ್ದಾರೆ.
