Asianet Suvarna News Asianet Suvarna News

ರಾಜ್ಯದಲ್ಲೇ ವಿಜಯಪುರದಲ್ಲಿದೆ ಹೆಚ್ಚು ವಕ್ಫ್‌ ಆಸ್ತಿ: ಸಚಿವ ಜಮೀರ್‌ ಅಹ್ಮದ್

ವಕ್ಫ್ ಆಸ್ತಿ ಕಬಳಿಕೆ- ಹಗರಣಕ್ಕೆ ಮುಂದಾಗಬಾರದು. ವಕ್ಫ್ ಆಸ್ತಿ ದೇವರ ಆಸ್ತಿಯಾಗಿದ್ದು, ಪ್ರತಿಯೊಬ್ಬರು ಅದರ ಸಂರಕ್ಷಣೆಗೆ ಮುಂದಾಗುವಂತೆ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್ ಖಾನ್ ಕರೆ ನೀಡಿದರು.

Vijayapura has the most waqf property in the state Says Minister Zameer Ahmed Khan gvd
Author
First Published Oct 9, 2024, 9:32 PM IST | Last Updated Oct 9, 2024, 11:05 PM IST

ವಿಜಯಪುರ (ಅ.09): ರಾಜ್ಯದಲ್ಲಿಯೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಇದೆ. ವಕ್ಫ್ ಆಸ್ತಿಯ ಸದ್ಭಳಕೆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೂರು ಕಲ್ಪಿಸುವ ಸದುದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಒಟ್ಟು 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿ ಕೇವಲ ೨೩ ಸಾವಿರ ಎಕರೆ ಮಾತ್ರ ಉಳಿದಿದೆ. ವಕ್ಫ್ ಆಸ್ತಿ ಕಬಳಿಕೆ- ಹಗರಣಕ್ಕೆ ಮುಂದಾಗಬಾರದು. ವಕ್ಫ್ ಆಸ್ತಿ ದೇವರ ಆಸ್ತಿಯಾಗಿದ್ದು, ಪ್ರತಿಯೊಬ್ಬರು ಅದರ ಸಂರಕ್ಷಣೆಗೆ ಮುಂದಾಗುವಂತೆ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್ ಖಾನ್ ಕರೆ ನೀಡಿದರು.

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ವಕ್ಫ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸಹಯೋಗದಲ್ಲಿ ಜಿಲ್ಲೆಯ ಮುತ್ತವಲ್ಲಿಗಳ ಸಮ್ಮೇಳನ ಹಾಗೂ ವಕ್ಫ್ ಅದಾಲತ್‌ಗೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರಿಗೂ ತಮ್ಮ ಹಕ್ಕು ಪ್ರತಿಪಾದನೆಗೆ ಸಂವಿಧಾನ ಅವಕಾಶ ನೀಡಿದ. ವಕ್ಫ್ ಆಸ್ತಿ ಯಾವುದೇ ವೈಯಕ್ತಿಕ ಸ್ವತ್ತಲ್ಲ, ಇದು ದೇವರ ಆಸ್ತಿ, ಇದರ ಸಂರಕ್ಷಣೆ ನಮ್ಮ ಹಕ್ಕು ಹಾಗೂ ಜವಾಬ್ದಾರಿಯಾಗಿದೆ ಎಂದು ವಸತಿ, ಹೇಳಿದರು.

Mangaluru: ಭಾರೀ ಮಳೆಗೆ ನೆರಿಯ ಸೇತುವೆ ಮತ್ತೆ ಮುಳುಗಡೆ: ಆತಂಕದಲ್ಲಿ ಜನರು

ವಕ್ಫ್‌ ಆಸ್ತಿ ಸಂರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಈವರೆಗೆ ರಾಜ್ಯಾದ್ಯಂತ ೧೦ ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ವಿಜಯಪುರದಲ್ಲಿ ೧೧ನೇ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕಳೆದ ೧೦-೧೫ ವರ್ಷಗಳಿಂದ ಬಾಕಿ ಉಳಿದ ವಕ್ಫ್‌ ಖಾತೆ ಬದಲಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾನು ಸಚಿವನಾದ ಮೇಲೆ ೭೨೭ ಖಾತೆ ಬದಲಾವಣೆಗೆ ಕ್ರಮ ವಹಿಸಲಾಗಿದೆ ಎಂದರು. ಈ ಅದಾಲತ್‌ನಲ್ಲಿ ವಕ್ಫ್ ಆಸ್ತಿಗಳ ಅತಿಕ್ರಮಣದ ೧೭ ಅರ್ಜಿಗಳು, ಖಬರಸ್ಥಾನ್‌, ಖಾತೆ ಬದಲಾವಣೆಯ ೮೧ ಅರ್ಜಿಗಳು, ಸರ್ವೇ ಕಾರ್ಯಕ್ಕಾಗಿ ೨೫ ಅರ್ಜಿ ಸೇರಿದಂತೆ ಒಟ್ಟು ೩೩೦ ಅರ್ಜಿ ಸಲ್ಲಿಕೆಯಾಗಿವೆ. 

ಇಲ್ಲಿ ಸಲ್ಲಿಕೆಯಾದ ಅರ್ಜಿಗಳು ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ, ಪ್ರತಿಯೊಂದು ಅರ್ಜಿಗಳಿಗೂ ಸ್ಪಂದಿಸಲಾಗುವುದು. ಸ್ವೀಕರಿಸಲಾದ ಅರ್ಜಿಗಳಿಗೆ ನಾಳೆಯೇ ಸಭೆ ನಡೆಸಿ, ಅಧಿಕಾರಿಗಳಿಗೆ ಒಂದು ತಿಂಗಳ ಕಾಲಾವಕಾಶ ನೀಡಿ ನಿಗದಿತ ಅವಧಿಯಲ್ಲಿಯೇ ಈ ಅರ್ಜಿಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಹೇಳಿದರು. ಅನುದಾನವನ್ನು ಬಳಸಿಕೊಂಡು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ, ರಾಜ್ಯದ ೧೫ ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಯಿಂದ ಪಿಯು ಕಾಲೇಜ್ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕಾಲೇಜ್ ನಿರ್ಮಾಣದ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಫಲಭರಿತ ತೆಂಗಿನ ಮರ ಕಡಿಯದಂತೆ ಹೈಕೋರ್ಟ್ ತಡೆ!

ರಾಜ್ಯ ಸಾಬೂನು-ಮಾರ್ಜಕ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ವಕ್ಫ್ ಅದಾಲತ್‌ಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮ, ತಾಲೂಕಾ ಮಟ್ಟದ ಹಾಗೂ ಜಿಲ್ಲಾ ಮಟ್ಟದ ವಿವಿಧ ವಕ್ಫ್ ಸಮಸ್ಯೆ, ಸ್ಮಶಾನ ಜಾಗದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಶ್ಲಾಘನೀಯ ಎಂದರು. ಮೌಲಾನಾ ತನ್ವೀರ ಪೀರಾ ಹಾಸ್ಮೀ, ವಿಧಾನ ಪರಿಷತ್ ಸದಸ್ಯ ಅಬ್ದುಲ್‌ ಜಬ್ಬಾರ, ಶಾಸಕರಾದ ಅಶೋಕ ಮನಗೂಳಿ, ವಿಠ್ಠಲ ಕಟಕದೊಂಡ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷ ಅನ್ವರಬಾಶಾ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್ ಸೇರಿದಂತೆ ಹಲವರು ಇದ್ದರು.

Latest Videos
Follow Us:
Download App:
  • android
  • ios