ವಿಜಯಪುರ ನಗರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ₹95 ಲಕ್ಷ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಧಾರ್ಮಿಕ ದತ್ತಿ ಇಲಾಖೆ ಮತ್ತು ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ನಗರದ ಹಲವೆಡೆ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ.

ವಿಜಯಪುರ: ನಗರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ₹ 95 ಮೊತ್ತದ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಭೂಮಿಪೂಜೆ ನೆರವೇರಿಸಿದರು.

Add Asianetnews Kannada as a Preferred SourcegooglePreferred

ಮೂರು ಸಮುದಾಯ ಭವನಗಳ ಕಾಮಗಾರಿ

ನಗರದ ವಾರ್ಡ್ ನಂ.2 ರಲ್ಲಿನ ಶಿವಬಸಪ್ಪ ಗದ್ದುಗೆ ದೇವಸ್ಥಾನದ ಹತ್ತಿರ ಧಾರ್ಮಿಕ ದತ್ತಿ ಇಲಾಖೆಯಿಂದ ಮಂಜೂರಾದ ₹ 10 ಲಕ್ಷ ಮೊತ್ತದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ, ವೀರಭದ್ರೇಶ್ವರ ದೇವಸ್ಥಾನದ ಹತ್ತಿರ ಧಾರ್ಮಿಕ ದತ್ತಿ ಇಲಾಖೆಯಿಂದ ಮಂಜೂರಾದ ₹ 15 ಲಕ್ಷ ಮೊತ್ತದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಹಾಗೂ ದರ್ಗಾದ ಕರಿಸಿದ್ದೇಶ್ವರ ದೇವಸ್ಥಾನ ಹತ್ತಿರ 2025-26ನೇ ಸಾಲಿನ‌ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ಮಂಜೂರಾದ ₹ 70 ಲಕ್ಷ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪ್ರತಿ ಭೂಮಿಪೂಜೆ ಬಳಿಕ ಸಾರ್ವಜನಿಕರ ಅಹವಾಲು ಆಲಿಸಿದರು.

ಇದನ್ನೂ ಓದಿ: ದಾಳಿಕೋರರ ಕೇಸ್‌ ವಾಪಸ್ ಮೂಲಕ ಸರ್ಕಾರ ಯಾವ ಸಂದೇಶ ನೀಡುತ್ತಿದೆ: ಸಿ.ಟಿ.ರವಿ ಪ್ರಶ್ನೆ

ಈ ವೇಳೆ ಪಾಲಿಕೆ ಮೇಯರ್‌ ಎಂ.ಎಸ್.ಕರಡಿ, ಹಾಲುಮತ ಸಮಾಜದ ಅಧ್ಯಕ್ಷ ಮಲ್ಲು ಯಾದವಾಡ, ಪಾಲಿಕೆ ಸದಸ್ಯ ರಾಜಶೇಖರ ಕುರಿಯವರ, ಮುಖಂಡರಾದ ಭೀಮನಗೌಡ ಪಾಟೀಲ, ಸಾಯಬಣ್ಣ ಭೋವಿ, ಶಂಕರ ಬಾಲದಂಡಿ, ಈರಣ್ಣ ವಾಡೆದ ಇತರರು ಉಪಸ್ಥಿತರಿದ್ದರು.

------------ಇದನ್ನೂ ಓದಿ: ರಾಜ್ಯದಲ್ಲಿ 20 ಹೊಸ ಜಿಟಿಟಿಸಿ ಕೇಂದ್ರ ಸ್ಥಾಪನೆ: ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಘೋಷಣೆ