Asianet Suvarna News Asianet Suvarna News

ರಾಯಚೂರು: ಅಕ್ರಮ ತಡೆಯಲು ಹೋದ ಅಧಿಕಾರಿಗೆ ಸಿಕ್ಕಿದ್ದು ಸಾವು

ಮರಳು ದಂಧೆಕೋರರು ಅಟ್ಟಹಾಸ ಮೆರೆದಿದ್ದು,  ಅಕ್ರಮ ಮರಳುಗಾರಿಕೆಯನ್ನ ತಡೆಯಲು ಬಂದ ಗ್ರಾಮ ಅಧಿಕಾರಿ ಮೇಲೆಯೇ ಲಾರಿ ಹರಿಸಿ ಕೊಲೆ ಮಾಡಿದ್ದಾರೆ.

Village Accountant crushed to death by  sand mining mafia in Raichur District
Author
Bengaluru, First Published Dec 22, 2018, 10:19 PM IST

ರಾಯಚೂರು, [ಡಿ. 22]: ಅಕ್ರಮ ಮರಳುಗಾರಿಕೆಯನ್ನ ತಡೆಯಲು ಮುಂದಾದ ಗ್ರಾಮ ಲೆಕ್ಕಾಧಿಕಾರಿ ಮೇಲೆ ಲಾರಿ ಹರಿಸಿ ಹತ್ಯೆ ಮಾಡಿರುವ ದಾರುಣ ಘಟನೆ ಇಂದು [ಶನಿವಾರ] ಮಾನ್ವಿ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ನಡೆದಿದೆ. 

ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದ್ದರಿಂದ ಬುದ್ದಿನ್ನಿ ಗ್ರಾಮದಲ್ಲಿ ರಾಯಲ್ಟಿ ತಪಾಸಣೆಗೆ ಹೋಗಿದ್ದರು. ಈ ವೇಳೆ ಮರಳು ದಂಧೆಕೋರರು ಗಾಮ ಲೆಕ್ಕಿಗ ಸಾಹೇಬ್ ಪಟೇಲ್​ರ ಕಾಲುಗಳ ಮೇಲೆ ಲಾರಿ ಹರಿಸಿ, ಲಾರಿ ಬಿಟ್ಟು ಪರಾರಿಯಾಗಿದ್ದಾರೆ.

ಕೂಡಲೇ ಸ್ಥಳೀಯರು ಅವರನ್ನು ರಿಮ್ಸ್​​ ಆಸ್ಪತ್ರೆ ಸೇರಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us:
Download App:
  • android
  • ios