* ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಿಷವಾಡಗಿಯಲ್ಲಿ ಘಟನೆ* ಜೀವಭಯದಿಂದ ಗ್ರಾಮ ತೊರೆದ ಯುವಕನ ಕುಟುಂಬಸ್ಥರು* ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ
ಅಥಣಿ(ಆ.24): ಹುಡುಗಿಯರನ್ನು ಚುಡಾಯಿಸುತ್ತಿದ್ದ ಯುವಕನೊಬ್ಬನಿಗೆ ಗ್ರಾಮಸ್ಥರು ಹಿಡಿದು ಧರ್ಮದೇಟು ನೀಡಿದ್ದಲ್ಲದೆ, ಆತನ ತಲೆ ಬೋಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Add Asianetnews Kannada as a Preferred Source

ಗ್ರಾಮಸ್ಥರಿಂದ ಧರ್ಮದೇಟು ತಿಂದು ತಲೆ ಬೋಳಿಸಿಕೊಂಡ ಯುವಕನನ್ನು ಸುಧಾಕರ ಡುಮ್ಮಗೋಳ ಎಂದು ಗುರುತಿಸಲಾಗಿದೆ. ಈ ಘಟನೆಯಿಂದ ಅವಮಾನಗೊಂಡಿರುವ ಯುವಕ ಸೇರಿದಂತೆ ಆತನ ಕುಟುಂಬದ ಸದಸ್ಯರೆಲ್ಲರೂ ಜೀವಭಯದಿಂದ ಗ್ರಾಮವನ್ನು ತೊರೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಬೆಳಗಾವಿ: ಯುವತಿಗೆ ಚುಡಾಯಿಸಿದ ಬೀದಿ ಕಾಮಣ್ಣನಿಗೆ ಬಿತ್ತು ಧರ್ಮದೇಟು!
ಯುವಕ ಸುಧಾಕರ ತಲೆ ಬೋಳಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿದ್ದು, ಈ ಒಂದು ಅಮಾನವೀಯ ಘಟನೆ ನಡೆದಿದ್ದರೂ ಅಥಣಿ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
