ಕೊರೋನಾ ಹೆಸರಲ್ಲಿ ಮತಾಂತರ ನಡೆಸಲೆತ್ನಿಸಿದವರಿಗೆ ಎಚ್ಚರಿಕೆ ನೀಡಿದ ಸ್ಥಳೀಯರು| ರಾಮನಗರ ಜಿಲ್ಲೆ ಕುದೂರು ಸಮೀಪದ ಅರಸನ ಗುಂಟೆ ಗ್ರಾಮದಲ್ಲಿ ನಡೆದ ಘಟನೆ| 

ಕುದೂರು(ಜು.13): ಜನರಲ್ಲಿ ಮೂಡಿರುವ ಕೊರೋನಾ ಭಯವನ್ನು ಬಂಡವಾಳ ಮಾಡಿಕೊಂಡು ಅಮಾಯಕರನ್ನು ಮತಾಂತರ ಮಾಡಲು ಮುಂದಾದ ಕ್ರೈಸ್ತ ಮಿಷನರಿ ಸದಸ್ಯರಿಗೆ ಸ್ಥಳೀಯರು ಬಿಸಿ ಮುಟ್ಟಿಸಿದ ಘಟನೆ ರಾಮನಗರ ಜಿಲ್ಲೆ ಕುದೂರು ಸಮೀಪದ ಅರಸನ ಗುಂಟೆ ಗ್ರಾಮದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಅರಸನಗುಂಟೆ ಗ್ರಾಮದ ಮನೆಯೊಂದಕ್ಕೆ ಶನಿವಾರ ತಡರಾತ್ರಿ ಆಗಮಿಸಿದ ಮಿಷನರಿ ಸದಸ್ಯರು, ನಾವು ಹೇಳಿದಂತೆ ನೀವು ನಮ್ಮ ದೇವರನ್ನು ಪ್ರಾರ್ಥನೆ ಮಾಡಿದರೆ ಕೊರೋನಾ ನಿಮಗೆ ಬರುವುದಿಲ್ಲ. ಬಂದಿದ್ದರೂ ವಾಸಿಯಾಗುತ್ತದೆ ಎಂದು ತಮ್ಮ ಧರ್ಮ ಪ್ರಚಾರಕ್ಕೆ ಮುಂದಾಗಿದ್ದಾರೆ. 

ರಾಮನಗರ: ಕೊರೋನಾ ವಾರಿಯ​ರ್ಸ್‌ಗೇ ಸೋಂಕು, ಬೆಚ್ಚಿಬಿದ್ದ ಜನತೆ

ಈ ಸಂಗತಿ ತಿಳಿದು ಗ್ರಾಮದ ಯುವಕರು ಇವರನ್ನು ಅಡ್ಡಗಟ್ಟಿ ಕುದೂರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇನ್ನೊಮ್ಮೆ ಇಂತಹ ಪ್ರಕರಣ ಸಂಭವಿಸಬಾರದು ಎಂದು ಮಿಷನರಿಗಳಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.