ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಅಧ್ಯಕ್ಷರನ್ನಾಗಿ ಎಂ.ಮಹೇಶ್ವರ ರಾವ್ ಅವರನ್ನು ನೇಮಕ ಮಾಡಿ ಆದೇಶಿಸಿದ 24 ಗಂಟೆಗಳ ಅವಧಿಯಲ್ಲಿಯೇ ಹಿಂದಿನ ಸ್ಥಾನಕ್ಕೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಬೆಂಗಳೂರು [ಆ.24]: ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಅಧ್ಯಕ್ಷರನ್ನಾಗಿ ಎಂ.ಮಹೇಶ್ವರ ರಾವ್ ಅವರನ್ನು ನೇಮಕ ಮಾಡಿ ಆದೇಶಿಸಿದ 24 ಗಂಟೆಗಳ ಅವಧಿಯಲ್ಲಿಯೇ ಹಿಂದಿನ ಸ್ಥಾನಕ್ಕೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
Add Asianetnews Kannada as a Preferred Source

ಮಹೇಶ್ವರರಾವ್ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಮರು ಆದೇಶ ಹೊರಡಿಸಲಾಗಿದೆ.
ಗುರುವಾರ ಮಹೇಶ್ವರ್ ರಾವ್ ಅವರನ್ನು ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರನ್ನಾಗಿ ವರ್ಗಾವಣೆಗೊಳಿಸಲಾಗಿತ್ತು.
