ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿಯಲ್ಲಿ ಕಳೆದ ಕೆಲವು ದಿನಗಳಿಂದ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಯಲ್ಲಿ ನೀರು ಹರಿಯಲು ಕಾರಣವಾಗಿದೆ. ಆದರೆ ಕುಶಾಲನಗರ ವ್ಯಾಪ್ತಿಯಲ್ಲಿ ಮಾತ್ರ ಮಳೆ ಪ್ರಮಾಣ ಕ್ಷೀಣಿಸಿದೆ.
ಕುಶಾಲನಗರ(ಜೂ.09): ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿಯಲ್ಲಿ ಕಳೆದ ಕೆಲವು ದಿನಗಳಿಂದ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಯಲ್ಲಿ ನೀರು ಹರಿಯಲು ಕಾರಣವಾಗಿದೆ. ಆದರೆ ಕುಶಾಲನಗರ ವ್ಯಾಪ್ತಿಯಲ್ಲಿ ಮಾತ್ರ ಮಳೆ ಪ್ರಮಾಣ ಕ್ಷೀಣಿಸಿದೆ.
Add Asianetnews Kannada as a Preferred Source

ಕಳೆದ ಮೂರು ವಾರಗಳಿಂದ ಕುಶಾಲನಗರ ಪಟ್ಟಣ ವ್ಯಾಪ್ತಿಯ ಕಾವೇರಿ ನದಿಯಲ್ಲಿ ಪ್ರವಾಹ ನಿಯಂತ್ರಣದ ಹಿನ್ನೆಲೆಯಲ್ಲಿ ನಡೆಯುತ್ತಿರುವ ನದಿ ನಿರ್ವಹಣಾ ಕಾಮಗಾರಿ ಇದರಿಂದ ಸ್ಥಗಿತಗೊಂಡಿದೆ.
ಮಾಲ್, ದೇವಸ್ಥಾನಗಳು ಓಪನ್: ಮಂಗಳೂರಲ್ಲಿ ಹೀಗಿತ್ತು ಮೊದಲ ದಿನ
ಕುಶಾಲನಗರ ಕೊಪ್ಪ ಕಾವೇರಿ ನದಿ ಸೇತುವೆ ಕೆಳಭಾಗದಲ್ಲಿ ತುಂಬಿದ್ದ ಸಾವಿರಾರು ಲೋಡ್ಗಳಷ್ಟುಮಣ್ಣು, ಗಿಡಗಂಟಿ, ಜೆಂಡು ತೆರವುಗೊಳಿಸಿದ ಹಿನ್ನೆಲೆಯಲ್ಲಿ ನೀರು ಸರಾಗವಾಗಿ ಹರಿಯುತ್ತಿದ್ದು ನೋಡುಗರಿಗೆ ಆಕರ್ಷಣೀಯ ಕೇಂದ್ರವಾಗಿ ಪರಿವರ್ತನೆಗೊಂಡಿದೆ.
