ಶಿವಮೊಗ್ಗದಲ್ಲಿ ಸಂಭವಿಸಿದ ಭಾರೀ ಸ್ಫೋಟದ ಕಾರಣ ನಿಗೂಢವಾಗಿಯೇ ಉಳಿದಿತ್ತು. ಇದೀಗ ಲಾರಿ ಚಾಲಕ ಮಾಡಿದ ಯಡವಟ್ಟಿನಿಂದ ಈ ದುರಂತ ಸಮಭವಿಸಿದೆ ಎನ್ನಲಾಗಿದೆ. 

ಶಿವಮೊಗ್ಗ (ಜ.24): ಹುಣಸೋಡು ಗ್ರಾಮದಲ್ಲಿ ಸಂಭವಿಸಿದ ‘ಮಹಾಸ್ಫೋಟ’ ಕುರಿತು ತನಿಖೆ ಮುಂದುವರಿದಿದ್ದು, ಸ್ಫೋಟಕ್ಕೆ ಕಾರಣವಾಗಿರಬಹುದಾದ ಅಂಶಗಳ ಕುರಿತು ತಜ್ಞರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ಫೋಟದ ಸಂದರ್ಭದಲ್ಲಿ ಎರಡು ಬಾರಿ ಶಬ್ದ ಕೇಳಿ ಬಂದಿತ್ತು. ಮೊದಲ ಬಾರಿ ಸಾಧಾರಣ ಶಬ್ದವಾಗಿದ್ದರೆ, ಎರಡನೇ ಬಾರಿಯದು ಭಾರೀ ಸ್ಫೋಟದ ಶಬ್ದವಾಗಿತ್ತು. 

ಈ ಎರಡು ಶಬ್ಧಗಳ ಹಿಂದೆ ತನಿಖಾಧಿಕಾರಿಗಳು ಬೆನ್ನು ಹತ್ತಿದ್ದಾರೆ. ಹೇಗೆ ಎರಡು ಬಾರಿ ಶಬ್ಧ ಬಂದಿದೆ ಎಂಬುದು ಪ್ರಶ್ನೆ. ಈ ನಿಟ್ಟಿನಲ್ಲಿ ಇದು ಲಾರಿ ಚಾಲಕನ ಯಡವಟ್ಟಿನಿಂದ ಸ್ಫೋಟ ಸಂಭವಿಸಿತೇ ಎಂಬ ಪ್ರಶ್ನೆಯೊಂದು ತನಿಖಾಧಿಕಾರಿಗಳಲ್ಲಿ ಮೂಡಿದೆ. 

ಶಿವಮೊಗ್ಗ ಸ್ಫೋಟದಲ್ಲಿ ಮೃತರಿಬ್ಬರ ಕಣ್ಣೀರ ಕಥೆ ಇದು : ತುಂಬು ಗರ್ಭಿಣಿ ಪತ್ನಿ ತೊರೆದು ಹೋದ ...

ಚಾಲಕ ಸ್ಫೋಟ ನಡೆದ ಸ್ಥಳಕ್ಕೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಚಲಿಸುವ ಸಂದರ್ಭದಲ್ಲಿ ವಿದ್ಯುತ್‌ ಕಂಬವೊಂದಕ್ಕೆ ಡಿಕ್ಕಿ ಹೊಡೆದಿರಬಹುದು. ಈ ವೇಳೆಯಲ್ಲಿ ತಂತಿ ತುಂಡಾಗಿ ಲಾರಿ ಮೇಲೆ ಬಿದ್ದು ಸ್ಫೋಟ ಸಂಭವಿರಬಹುದೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ.