ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಾದರೆ ಇದರ ಹಿಂದಿರುವುದು ಯಾರು ಎನ್ನುವ ಸತ್ಯಾಸತ್ಯತೆ ಹೊರಬರಲಿದೆ ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿದರು. 

ಚಿಕ್ಕಮಗಳೂರು (ಮಾ.15) : ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿಕೆಶಿ ತಮ್ಮ ಹೆಸರನ್ನ ಯಾಕೆ ತಳುಕು ಹಾಕುತ್ತಿದ್ದಾರೆ ಗೊತ್ತಾಗ್ತಿಲ್ಲ. ತನಿಖೆಯಾಗಲಿ ಪ್ರೊಡ್ಯೂಸರ್, ಡೈರಕ್ಟರ್, ಆ್ಯಕ್ಟರ್ ಯಾರೆಂದು ಗೊತ್ತಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

Add Asianetnews Kannada as a Preferred SourcegooglePreferred

ಚಿಕ್ಕಮಗಳೂರಿನಲ್ಲಿಂದು ಮಾತನಾಡಿದ ಸಿ.ಟಿ.ರವಿ ಸಿಡಿ ಕೇಸ್ ಕರ್ನಾಟಕ ರಾಜಕಾರಣಕ್ಕೆ ಗೌರವ ತರುವ ವಿಷಯವಲ್ಲ. ಹಿಂದೆ ಮೌಲ್ಯಧಾರಿತ ರಾಜಕೀಯದ ಚರ್ಚೆ ನಡೆಯುತ್ತಿತ್ತು. ಈಗ ಸಿಡಿ ಆಧಾರಿತ ರಾಜಕಾಕೀಯದ ಚರ್ಚೆ ನಡೆಯುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ರಾಸಲೀಲೆ ಸಿಡಿ : ನಾನೇ ಕೇಸ್ ಕೊಡಿಸ್ತೀನಿ ಎಂದ ಡಿಕೆಶಿ ...

ಮೌಲ್ಯಧಾರಿತವೋ... ಸಿಡಿ ಆಧಾರಿತ ರಾಜಕಾರಣ ಬೇಕೋ, ಎಲ್ಲರೂ ಯೋಚಿಸಬೇಕು. ಸಾರ್ವಜನಿಕ ಜೀವನದಲ್ಲಿರುವ ನಾವು ಪರಿಶುದ್ಧ ರಾಜಕಾರಣದ ಬಗ್ಗೆ ಆಲೋಚಿಸಬೇಕು ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.

ಜಕಾರಣಿಗಳಿಗೆ ಜನ ಲಜ್ಜೆ-ಮನಲಜ್ಜೆ ಎರಡೂ ಇರಬೇಕು. ನಮಗೆ ನಾವೇ ಪರಿಮಿತ ಹಾಕಿಕೊಳ್ಳೋದು ಮನಲಜ್ಜೆ, ಜನರಿಗೆ ಹೆದರೋದು ಮನಲಜ್ಜೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.