ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯದ ಕೆಂಕೆರೆ ಕೆರೆ ಬಳಿ ಕಾಡಾನೆ ಸಾವನ್ನಪ್ಪಿದ ಘಟನೆ ನಡೆದಿದೆ.
ಚಾಮರಾಜನಗರ (ಮಾ.23): ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯದ ಕೆಂಕೆರೆ ಕೆರೆ ಬಳಿ ಕಾಡಾನೆ ಸಾವನ್ನಪ್ಪಿದ ಘಟನೆ ನಡೆದಿದೆ.
Add Asianetnews Kannada as a Preferred Source

ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರೀಕ್ಷೆ ನಡೆಸಿದ ಅರಣ್ಯಾಧಿಕಾರಿಗಳು ಮೃತಪಟ್ಟಿರುವುದು ಹೆಣ್ಣಾನೆ. ಸಾವಿನ ಹಿನ್ನೆಲೆ ತಿಳಿಯಲು ಮರಣೋತ್ತರ ಪರೀಕ್ಷೆ ಕಳಿಸಿದ್ದ ಅರಣ್ಯ ಅಧಿಕಾರಿಗಳು. ಇದೀಗ ಸ್ವಾಭಾವಿಕವಾಗಿ ಮೃತಪಟ್ಟಿರುವುದು ದೃಢವಾಗಿದೆ.
ನಿನ್ನೆಯಷ್ಟೇ ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ದೇಹಳ್ಳಿ ಸಮೀಪದ ಕಟ್ಟಿಗೆ ಇಡ್ಕೆಮನೆ ತೋಟಕ್ಕೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಸ್ಪರ್ಶಕ್ಕೆ ಮೃತಪಟ್ಟಿತ್ತು.
