Asianet Suvarna News Asianet Suvarna News

ಬಡವರಿಗಾಗಿ ಮತ್ತೆ ಅಧಿಕಾರಕ್ಕೆ ಬರಲಿದೆ

ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಜನಪರ ಅಭಿವೃದ್ಧಿ ಯೋಜನೆಗಳ ಹೆಜ್ಜೆ ಗುರುತೇ ನನಗೇ ಆದರ್ಶ. 25ವರ್ಷ ನಾನು ಕೊರಟಗೆರೆ ಕ್ಷೇತ್ರದಲ್ಲಿ ಹಗಲು ರಾತ್ರಿ ಎನ್ನದೆ ಬಡಜನರ ಸೇವೆ ಮಾಡಿದ್ದೇನೆ. ನಾನು ಮತ್ತೇ 2023ಕ್ಕೆ ಶಾಸಕ ಆಗೋದು ಬಡಜನರ ಸೇವೆಗೆ ಮತ್ತು ಕೊರಟಗೆರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾತ್ರ ಎಂದು ಮಾಜಿ ಶಾಸಕ ಪಿ.ಆರ್‌.ಸುಧಾಕರಲಾಲ್‌ ತಿಳಿಸಿದರು.

Will come back to power for the poor snr
Author
First Published Apr 13, 2023, 6:01 AM IST | Last Updated Apr 13, 2023, 6:01 AM IST

 ಕೊರಟಗೆರೆ : ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಜನಪರ ಅಭಿವೃದ್ಧಿ ಯೋಜನೆಗಳ ಹೆಜ್ಜೆ ಗುರುತೇ ನನಗೇ ಆದರ್ಶ. 25ವರ್ಷ ನಾನು ಕೊರಟಗೆರೆ ಕ್ಷೇತ್ರದಲ್ಲಿ ಹಗಲು ರಾತ್ರಿ ಎನ್ನದೆ ಬಡಜನರ ಸೇವೆ ಮಾಡಿದ್ದೇನೆ. ನಾನು ಮತ್ತೇ 2023ಕ್ಕೆ ಶಾಸಕ ಆಗೋದು ಬಡಜನರ ಸೇವೆಗೆ ಮತ್ತು ಕೊರಟಗೆರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾತ್ರ ಎಂದು ಮಾಜಿ ಶಾಸಕ ಪಿ.ಆರ್‌.ಸುಧಾಕರಲಾಲ್‌ ತಿಳಿಸಿದರು.

ಕೊರಟಗೆರೆ ಪಟ್ಟಣದ ಜಾಮಿಯಾ ಸಮುದಾಯ ಭವನದ ಆವರಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪರಿಶಿಷ್ಟ ಜಾತಿಗಳ ಕಾರ್ಯಕರ್ತರ ಬೃಹತ್‌ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

15ವರ್ಷ ಜಿಪಂ ಸದಸ್ಯನಾಗಿ ಜನಸೇವೆ ಸಲ್ಲಿಸಿದ ನನಗೆ ಕೊರಟಗೆರೆ ಕ್ಷೇತ್ರದ ಸಂಪೂರ್ಣ ಪರಿಚಯವಿದೆ. ನನ್ನ ಕ್ಷೇತ್ರಕ್ಕೆ ಅಗತ್ಯವಿರುವ ಯೋಜನೆ ಮತ್ತು ಬಡಜನತೆಯ ಸಮಸ್ಯೆಯ ಬಗ್ಗೆ ನನಗೇ ಅರಿವಿದೆ. ನಾನು ಶಾಸಕನಾದಾಗ ಗಂಗಾಕಲ್ಯಾಣ, ಸಾಗುವಳಿ ಚೀಟಿ, ವಿಶೇಷ ಚೇತನರಿಗೆ ವಾಹನ, ಪ್ರವಾಸೋಧ್ಯಮ ಇಲಾಖೆಯ ವಾಹನ ಸೇರಿದಂತೆ ಸಾವಿರಾರು ಜನರಿಗೆ ಸಾಲಸೌಲಭ್ಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.

ರಾಜ್ಯ ಹಿಂದುಳಿದ ವರ್ಗದ ಕಾರ್ಯಾಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ, ನಾವು ಮಾಡುವ ಕೆಲಸವನ್ನ ಜನರೇ ಇನ್ನೋಬ್ಬರ ಮುಂದೇ ಹೇಳುವುದೇ ನಿಜವಾದ ಕೆಲಸ. ಕೊರಟಗೆರೆ ಕ್ಷೇತ್ರದ ಪ್ರತಿ ಗ್ರಾಮದಲ್ಲಿಯು ಸುಧಾಕರಲಾಲ್‌ ಮಾಡಿರುವ ಆರೋಗ್ಯ ಕ್ಷೇತ್ರದ ಕೊಡುಗೆ ಇದೆ. ಕಾಂಗ್ರೆಸ್‌ ಶಾಸಕರನ್ನು ಭೇಟಿಯಾಗಲು 3ಜನ ಮುಖಂಡರ ದಾಟಿ ಹೋಗಬೇಕಿದೆ. ಆದ್ರೇ ನಮ್ಮ ಲಾಲ್‌ಗೆ ಕೂಗಿದ್ರೇ ಸಾಕು ನಿಮ್ಮ ಮನೆ ಬಾಗಲಿಗೆ ಬರುತ್ತಾರೆ. ನಿಮಗೇ ಯಾರು ಬೇಕು ನೀವೇ ಯೋಚಿಸಿ ಮತ ನೀಡಿ ಎಂದು ಮನವಿ ಮಾಡಿದರು.

ತುಮಕೂರು ಜಿಲ್ಲಾ ಪರಿಶಿಷ್ಟವರ್ಗಗಳ ಜಿಲ್ಲಾಧ್ಯಕ್ಷ ಶಿವಕುಮಾರ್‌ ಮಾತನಾಡಿ, ಕೊರಟಗೆರೆ ಕ್ಷೇತ್ರದ ಜನರಿಗೆ ಸರಳವಾಗಿ ಸೀಗುವ ಜನನಾಯಕ ನಮ್ಮ ಸುಧಾಕರಲಾಲ್‌ ಮಾತ್ರ. ಅವರಿಗೆ 25ವರ್ಷ ಕೊರಟಗೆರೆ ಕ್ಷೇತ್ರದ ಜನತೆಯ ಜೊತೆ ಬೆರೆತು ಜನಸೇವೆ ಮಾಡಿದ ಅನುಭವವಿದೆ. ಬಡವರು ಮತ್ತು ರೈತರ ಪರವಾಗಿ ಚಿಂತನೇ ನಡೆಸುವ ಪ್ರಾದೇಶಿಕ ಜೆಡಿಎಸ್‌ ಪಕ್ಷಕ್ಕೆ ನಿಮ್ಮೇಲ್ಲರ ಆರ್ಶಿವಾದ ಇರಲಿ ಎಂದು ಹೇಳಿದರು.

ಸಮಾವೇಶದಲ್ಲಿ ಜಿಲ್ಲಾ ಜೆಡಿಎಸ್‌ ಮಹಿಳಾಧ್ಯಕ್ಷೆ ಕುಸುಮಾ, ಕೊರಟಗೆರೆ ಜೆಡಿಎಸ್‌ ಕಾರ್ಯಧ್ಯಕ್ಷ ನರಸಿಂಹರಾಜು, ಉಪಾಧ್ಯಕ್ಷ ಕಾಮರಾಜು, ಕಾರ್ಯದರ್ಶಿ ಲಕ್ಷ್ಮಣ್‌, ವಕ್ತಾರ ಲಕ್ಷ್ಮೇಶ್‌, ಮುಖಂಡರಾದ ವೀರಕ್ಯಾತರಾಯ, ಸಿದ್ದಮಲ್ಲಪ್ಪ, ಪುಟ್ಟನರಸಪ್ಪ, ರಮೇಶ್‌, ಲಕ್ಷ್ಮೇನಾರಾಯಣ್‌, ರವಿಕುಮಾರ್‌, ಮಾರುತಿ, ಶಿವರಾಜ್‌, ನರಸಿಂಹಮೂರ್ತಿ, ದೊಡ್ಡಯ್ಯ, ನಾಗರಾಜು, ಸೈಪುಲ್ಲಾ, ಕಲೀಂವುಲ್ಲಾ ಸೇರಿದಂತೆ ಇತರರು ಇದ್ದರು.

ಜೆಡಿಎಸ್‌ಗೆ 100 ಮಂದಿ ಸೇರ್ಪಡೆ

ಕೊರಟಗೆರೆ ಕ್ಷೇತ್ರದ ಆರು ಹೋಬಳಿಯ ಎಸ್‌ಸಿ ಸಮುದಾಯದ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನೂರಾರು ಜನ ಯುವಕರು ಕಾಂಗ್ರೆಸ್‌ ಪಕ್ಷವನ್ನು ತೊರೆದು ಮಾಜಿ ಶಾಸಕ ಸುಧಾಕರಲಾಲ್‌ ಸಮ್ಮುಖದಲ್ಲಿ ಬುಧವಾರ ಸೇರ್ಪಡೆಯಾದರು.

ಸುವರ್ಣಮುಖಿ ಮತ್ತು ಜಯಮಂಗಳಿ ನದಿ ತುಂಬಿ ಹರಿದಾಗಲೇ ರೈತರಿಗೆ ಗೊತ್ತಾಗಿದ್ದು ಅಂತರ್ಜಲ ಮಟ್ಟದ ಏರಿಕೆಯಾಗಿದೆ ಎಂದು. 5ವರ್ಷ ಶಾಸಕನಾಗಿ ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಹಸ್ತಾಂತರ ಮಾಡಿದ ಕೊಳವೆ ಬಾವಿಗಳೇ ಇಂದು ಅಭಿವೃದ್ಧಿಗೆ ಸಾಕ್ಷಿ. 35 ಸಾವಿರ ಜನರಿಗೆ ಲಾಲ್‌ ಮಾಡಿರುವ ಆರೋಗ್ಯ ಸೇವೆಯ ವಿಚಾರವು ನಾವು ಹಳ್ಳಿಗಳಿಗೆ ಹೋದಾಗಲೇ ಗೊತ್ತಾಗಿದ್ದು. ಬಡಜನರು ಮತ್ತು ರೈತರ ರಕ್ಷಣೆಗೆ ಲಾಲ್‌ ಮತ್ತೋಮ್ಮೆ ಗೆಲ್ಲಲೇಬೇಕಿದೆ.

ಕೆ.ಎನ್‌.ನಟರಾಜು, ಸ್ಥಾಯಿ ಸಮಿತಿ ಅಧ್ಯಕ್ಷ

5ವರ್ಷ ಶಾಸಕನಾಗಿ ನೂರಾರು ಜನರಿಗೆ ವೈಯಕ್ತಿಕ ಸೌಲಭ್ಯ ನೀಡಿದ ಕೀರ್ತಿ ಲಾಲ್‌ಗೆ ಸಲ್ಲಲಿದೆ. 25ವರ್ಷ ಕೊರಟಗೆರೆ ಕ್ಷೇತ್ರದಲ್ಲಿ ಹಗಲುರಾತ್ರಿ ಜನಸೇವೆ ಮಾಡಿದ್ದಾರೆ. 2023ಕ್ಕೆ ಮತ್ತೇ ಸುಧಾಕರಲಾಲ್‌ ಗೆಲುವು ಖಚಿತ. ಏ.15ರಂದು ಜೆಡಿಎಸ್‌ ಅಭ್ಯರ್ಥಿಯಾಗಿ ಲಾಲ್‌ ನಾಮಪತ್ರ ಸಲ್ಲಿಸ್ತಾರೇ. ಕರ್ನಾಟಕ ಮತ್ತು ಕೊರಟಗೆರೆ ಅಭಿವೃದ್ದಿಗೆ ಪಂಚರತ್ನ ಯೋಜನೆ ಸಹಕಾರಿ ಆಗಲಿದೆ.

ಲಕ್ಷಿತ್ರ್ಮೕನರಸಯ್ಯ. ಎಸ್‌ಸಿ ಘಟಕ ಅಧ್ಯಕ್ಷ. ಕೊರಟಗೆರೆ

Latest Videos
Follow Us:
Download App:
  • android
  • ios