ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ| ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|
ಹೊನ್ನಾವರ(ನ.19): ತನ್ನ ಮಗಳ ಅನಾರೋಗ್ಯದ ವಿಷಯ ಮನಸ್ಸಿಗೆ ಹಚ್ಚಿಕೊಂಡು ತಾಯಿ ನದಿಗೆ ಹಾರಿ ಮೃತಪಟ್ಟ ಕರುಣಾಜನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೃತಪಟ್ಟ ದುರ್ದೈವಿ ತಾಲೂಕಿನ ಹಡಿನಬಾಳ ಜಂಬೊಳ್ಳಿಯ 45 ವರ್ಷದ ಮಂಜುಳಾ ನಾಯ್ಕ ಎಂದು ಗುರುತಿಸಲಾಗಿದೆ.
ರೈತರಿಗೆ ಕೋಟ್ಯಂತ ರು. ಬಾಕಿ ಕೊಡ್ಬೇಕಿದ್ದ ಗಿರಣಿ ಮಾಲಿಕ ಆತ್ಮಹತ್ಯೆ!
ಇವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ತನ್ನ ಮಗಳಿಗಿದ್ದ ಮಾನಸಿಕ ಕಾಯಿಲೆಯನ್ನು ಮನಸ್ಸಿಗೆ ಹಚ್ಚಿಕೊಂಡು ಹಡಿನಬಾಳ ಸೇತುವೆ ಮೇಲಿಂದ ಗುಂಡಬಾಳ ನದಿಗೆ ಹಾರಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
