ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ| ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಹೊನ್ನಾವರ(ನ.19): ತನ್ನ ಮಗಳ ಅನಾರೋಗ್ಯದ ವಿಷಯ ಮನಸ್ಸಿಗೆ ಹಚ್ಚಿಕೊಂಡು ತಾಯಿ ನದಿಗೆ ಹಾರಿ ಮೃತಪಟ್ಟ ಕರುಣಾಜನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ನಡೆದಿದೆ. 

Add Asianetnews Kannada as a Preferred SourcegooglePreferred

ಮೃತಪಟ್ಟ ದುರ್ದೈವಿ ತಾಲೂಕಿನ ಹಡಿನಬಾಳ ಜಂಬೊಳ್ಳಿಯ 45 ವರ್ಷದ ಮಂಜುಳಾ ನಾಯ್ಕ ಎಂದು ಗುರುತಿಸಲಾಗಿದೆ. 

ರೈತರಿಗೆ ಕೋಟ್ಯಂತ ರು. ಬಾಕಿ ಕೊಡ್ಬೇ​ಕಿದ್ದ ಗಿರಣಿ ಮಾಲಿಕ ಆತ್ಮ​ಹ​ತ್ಯೆ!

ಇವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ತನ್ನ ಮಗಳಿಗಿದ್ದ ಮಾನಸಿಕ ಕಾಯಿಲೆಯನ್ನು ಮನಸ್ಸಿಗೆ ಹಚ್ಚಿಕೊಂಡು ಹಡಿನಬಾಳ ಸೇತುವೆ ಮೇಲಿಂದ ಗುಂಡಬಾಳ ನದಿಗೆ ಹಾರಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.