Asianet Suvarna News Asianet Suvarna News

ಚಿಕ್ಕಮಗಳೂರು: ಕಾಡಾನೆ ತುಳಿದು ಮಹಿಳೆ‌ ಸಾವು, 2 ತಿಂಗಳಲ್ಲಿ ಇಬ್ಬರು ಬಲಿ

ಕಾಫಿ ತೋಟದ ಕೆಲಸಕ್ಕೆ ಹೋಗುವಾಗ ಆನೆ ದಾಳಿ ನಡೆದಿದೆ. ಆಲ್ದೂರು ವಲಯದ ವ್ಯಾಪ್ತಿಯಲ್ಲಿ 7 ಆನೆಗಳ ಹಿಂಡು ನಿರಂತರವಾಗಿ ಓಡಾಡುತ್ತಿದ್ದು, ಈ ಪೈಕಿ ಒಂದು ಆನೆ ಹಿಂಡಿನಿಂದ ಬೇರಟ್ಟಿದೆ. ಇದೇ ಆನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ.

Woman Dies Due to Elephant Attack in Chikkamagaluru grg
Author
First Published Nov 8, 2023, 12:14 PM IST

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ನ.08):  ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊರ್ವರು ಸಾವಿಗೀಡಾದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪ ಹೆಡದಾಳು ಗ್ರಾಮದಲ್ಲಿ ಇಂದು(ಬುಧವಾರ) ಮುಂಜಾನೆ ನಡೆದಿದೆ. ಮೀನಾ(45) ಎಂಬಾಕೆ ಮೃತ ದುರ್ದೈವಿಯಾಗಿದ್ದು, ಆನೆ ದಾಳಿಗೆ ಕಳೆದ ಎರಡು ತಿಂಗಳಲ್ಲಿ ಸಂಭವಿಸಿರುವ ಎರಡನೇ ಬಲಿ ಇದಾಗಿದ್ದು, ಜನತೆ ತೀವ್ರ ಆತಂಕಕ್ಕೊಳಗಾಗಿದ್ದಾರೆ. 

ಎರಡು ತಿಂಗಳಲ್ಲಿ‌ ಎರಡನೇ ಬಲಿ

ಕಾಫಿ ತೋಟದ ಕೆಲಸಕ್ಕೆ ಹೋಗುವಾಗ ಆನೆ ದಾಳಿ ನಡೆದಿದೆ. ಆಲ್ದೂರು ವಲಯದ ವ್ಯಾಪ್ತಿಯಲ್ಲಿ 7 ಆನೆಗಳ ಹಿಂಡು ನಿರಂತರವಾಗಿ ಓಡಾಡುತ್ತಿದ್ದು, ಈ ಪೈಕಿ ಒಂದು ಆನೆ ಹಿಂಡಿನಿಂದ ಬೇರಟ್ಟಿದೆ. ಇದೇ ಆನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬಿಗ್ ಇಂಪ್ಯಾಕ್ಟ್ : ಕಾಂಬೋಡಿಯಾದಲ್ಲಿ ಲಾಕ್ ಆಗಿದ್ದ ಕನ್ನಡಿಗನ ರಕ್ಷಣೆ

ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜನರು ರಸ್ತೆಯಲ್ಲಿ ಮಹಿಳೆಯ ಶವವನ್ನಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಆಲ್ದೂರು ಅರಣ್ಯ ವಲಯದಲ್ಲಿ ಆನೆ ದಾಳಿಗೆ ಪದೇ ಪದೇ ಸಾವುಗಳು ಸಂಭವಿಸುತ್ತಿದ್ದರೂ ಚುನಾಯಿತ ಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಶಾಸಕಿ ನಯನಾ ಮೋಟಮ್ಮ ತೀವ್ರ ತರಾಟೆ

ಸ್ಥಳಕ್ಕೆ ಆಗಮಿಸಿದ ಶಾಸಕಿ ನಯನಾ ಮೋಟಮ್ಮ ಮತ್ತು ಅರಣ್ಯ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಗ್ರಾಮಸ್ಥರು ಅವರ ಯಾವುದೇ ಭರವಸೆಗಳನ್ನು ಒಪ್ಪುತ್ತಿಲ್ಲ. ಜನರ ಮನವೊಲಿಸುವ ಶಾಸಕರ ಪ್ರಯತ್ನವೂ ವಿಫಲವಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಬರಬೇಕು ಅಲ್ಲಿಯವರೆಗೆ ಶವ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಜನರು ಮೂಡಿಗೆರೆ ಪ್ರವಾಸದಲ್ಲೇ ಇರುವ ಮುಖ್ಯಮಂತ್ರಿಗಳನ್ನು ಇಲ್ಲಿಗೆ ಕರೆಸಬೇಕು ಎಂದು ಶಾಸಕಿ ಮೋಟಮ್ಮ ಅವರನ್ನು ಆಗ್ರಹಿಸಿದರು.

ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬರುವವರೆಗೆ ನೀವು ಜಾಗ ಬಿಟ್ಟು ಕದಲಬಾರದು. ನಮಗೆ ಆನೆ, ಕಾಡು ಪ್ರಾಣಿಗಳಿಂದ ರಕ್ಷಣೆ ಕೊಡಿಸುವ ಜವಾಬ್ದಾರಿ ನಿಮ್ಮದು ಆ ಕಾರಣಕ್ಕೆ ನೀವು ಇಲ್ಲೇ ಇರಬೇಕು ಎಂದು ಶಾಸಕರನ್ನು ಆಗ್ರಹಿಸಿದರು. 

ಹೊಲ, ಗದ್ದೆ, ತೋಟ, ಜನವಸತಿ ಪ್ರದೇಶಗಳಿಗೆ ದಾಳಿ ಇಡುತ್ತ ಬೆಳೆಹಾನಿ, ಜೀವಹಾನಿ ಉಂಟುಮಾಡುತ್ತಿರುವ ಆನೆ ಹಿಂಡು ಜನರ ನಿದ್ದೆಗೆಡಿಸಿದೆ. ಇಷ್ಟಾದರೂ ಅರಣ್ಯ ಇಲಾಖೆ ಪಟಾಕಿಗಳನ್ನು ಸಿಡಿಸಿ ಆನೆಗಳನ್ನು ಬೆದರಿಸುವಂತಹ ಕ್ರಮಗಳನ್ನು ಬಿಟ್ಟರೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಆರೋಪಿಗೆ ಕಾಲಿಗೆ ಫೈರ್ ಮಾಡಿದ ಪೊಲೀಸರೇ ಆರೈಕೆ ಮಾಡಿ ಮಾನವೀಯತೆ ಮೆರೆದಿದ್ದಾರೆ!

ಎರಡು ತಿಂಗಳ ಹಿಂದಷ್ಟೇ ಕಣತಿ ಸಮೀಪ ವ್ಯಕ್ತಿಯೋರ್ವನನ್ನು ಆನೆ ಬಲಿ ಪಡೆದಿತ್ತು. ಅಂದು ಆನೆಗಳ ಹಾವಳಿ ನಿಯಮತ್ರಣಕ್ಕೆ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಸಿಬ್ಬಂದಿ ನೀಡಿದ್ದ ಭರವಸೆ ಹುಸಿಯಾಗಿದೆ. ಕೂಲಿ ಕಾರ್ಮಿಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಮೃತರ ಮನೆಯವರಿಗೆ ಒಂದಿಷ್ಟು ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿರುವ ಚುನಾಯಿತ ಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ದೂರಿದರು.

ರಾಜ್ಯ ಹೆದ್ದಾರಿ ತಡೆದು ಸ್ಥಳೀಯರ ಆಕ್ರೋಶ

2 ತಿಂಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ ಹಿನ್ನೆಲೆ ಕಾರ್ಮಿಕರು, ಸ್ಥಳೀಯರು ಆಲ್ದೂರಿನ ಅರಣ್ಯ ಇಲಾಖೆ ಮುಂದೆ ದಿಢೀರ್ ಪ್ರತಿಭಟನೆ ನಡೆಸಿದರು.ರಾಜ್ಯ ಹೆದ್ದಾರಿ ತಡೆದು ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರ ಆಕ್ರೋಶ ವ್ಯಕ್ತಪಡಿಸಿದ್ದರು.ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ರಸ್ತೆ ಮಧ್ಯೆ ಪ್ರತಿಭಟನೆ ನಡೆಸುತ್ತಿರುವ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.ಅರಣ್ಯ ಇಲಾಖೆ ವಿರುದ್ಧ ಸ್ಥಳಿಯರ ತೀವ್ರ ಆಕ್ರೋಶ ಹೊರಹಾಕಿ ಘೋಷಣೆಗಳನ್ನು ಕೂಗಿದರು. ಅರಣ್ಯ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕುವ ಯತ್ನವನ್ನು ಕೂಡ ಸ್ಥಳೀಯರು ನಡೆಸಿದರು.ನಿಮಗೆ ಇನ್ನೆಷ್ಟು ಬಲಿ ಬೇಕು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ‌.

Follow Us:
Download App:
  • android
  • ios