ಗೌರಮ್ಮಳ ಆಗಲಿಕೆಗೆ ಇಡೀ ಕುಟುಂಬ ಕಣ್ಣೀರಿಟ್ಟಿತು. ಬನ್ನಿಕೊಪ್ಪ ಗ್ರಾಮಸ್ಥರು ಹಾಗೂ ಕಲ್ಲೂರಿನ ಪತಿ ಮನೆಯವರು ದೇವರಿಗೆ ಕರುಣೆ ಎಂಬುದು ಇಲ್ಲವೇ ಎಂದು ಹಿಡಿಶಾಪ ಹಾಕಿದರು. ದೇವರ ಪೂಜೆಗೆ ಹೋದಾಕಿಗೆ ದೇವರು ಹೀಗೆ ಮಾಡಬಹುದಿತ್ತೇ ಎಂದು ಗೌರಮ್ಮಳ ತಾಯಿ ಅನಸೂಯಮ್ಮ ಮಮ್ಮಲ ಮರಗಿದರು. 

ಅಮರೇಶ್ವರಸ್ವಾಮಿ ಕಂದಗಲ್ಲಮಠ 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕುಕನೂರು(ಅ.11):  ದೇವಿಗೆ ಪೂಜೆ ಸಲ್ಲಿಸಿ ಮನೆಗೆ ತೆರಳಿ ಹೆತ್ತ ಕಂದನ ಹಣೆಗೆ ದೇವರ ಅಂಗಾರ ಹಚ್ಚಿ ಕೈ ಕಾಲು ಸವರಬೇಕಿದ್ದ ಹಡೆದವ್ವ ಮನೆಗೆ ಬರಲೇ ಇಲ್ಲ! 

ಕೂಸು ಎದ್ದು ತೊಟ್ಟಿಲಲ್ಲಿ ಚಿಟ್ಟನೆ ಚಿರುತ್ತ ಅಳುತ್ತಿತ್ತು. ಅವ್ವ ಅವ್ಯ ಎಂದು ಬಿಕ್ಕಳಿಸಲು ಆರಂಭಿಸಿತು. ಹೊಟ್ಟೆ ಹಸಿವು. ಅವ್ವಾ ಬಂದು ಹಾಲು ಕೂಡಿಸ್ಯಾಳು ಎಂಬ ಧ್ವನಿಯಲ್ಲಿ ಅಳುತ್ತಿತ್ತು. ಕೂಸ್ಯಾಕೋ ಹಸಿದು ಇಷ್ಟು ಅಳುತ್ತೈತಿ ಈಕೇಲ್ಲಿಗೇ ಹೋಗ್ಯಾಳು, ಇನ್ನು ಯಾಕ್‌ ಬಂದಿಲ್ಲ ಎಂದು ಬಡಬಿಡಿಸುತ್ತಾ ಮಗಳ ಹುಡುಕಿ ಕೊಂಡು ಕೆರೆಯತ್ತ ತಾಯಿ ಅನಸೂಯಮ್ಮ ಹೊರಟಳು. ಪೂಜೆ ಸಲ್ಲಿಸಿ ಎದುರಿಗೆ ಇನ್ನು ಬಂದವರಿಗೆ ನನ್ನ ಮಗಳ ನೋಡಿದ್ರಾ. ಮೊಮ್ಮಗ ಅಳಾಕುಂತಾನ ಎಂದು ಅವಸರದಲ್ಲಿ ಹೆಜ್ಜೆ ಹಾಕುತ್ತಾ ಹೊರಟ ತಾಯಿಗೆ ಕೆರೆ ದಡದ ಮೆಟ್ಟಿಲುಗಳಲ್ಲಿ ಕಂಡಿದ್ದು ಮಗಳು ಪೂಜೆಗೆ ತಂದಿದ್ದ ಪೂಜೆ ಸಾಮಗ್ರಿ. ಅದನ್ನು ಕಂಡ ಅನ ಸೂಯಮ್ಮ ಮಗಳು ಕೆರೆಯಲ್ಲಿ ಕಾಲು ಜಾರಿ ಬಿದ್ದಿದ್ದು ಕೇಳಿ ಆಕಾಶ ವೇ ತಲೆಯಮೇಲೆ ಕಳಚಿದಂತೆ ಗೋಗರೆ ಗೌರಮ್ಮ ಕೆರೆಗೆ ಬಿದ್ದಿದ್ದ ಗೌರಮ್ಮಳನ್ನು ಸ್ಥಳೀಯರು ಹುಡು ಕಾಡಿ ತಂದಾಗ ಜೀವ ಇನ್ನೂ ಇತ್ತು. ಆಸ್ಪತ್ರೆಗೆ ದಾಖಲಿಸಲು ತೆರಳುವ ದಾರಿ ಮಧ್ಯೆ ಜೀವ ಹೋಯಿತು ಎನ್ನುತ್ತಾರೆ ಗ್ರಾಮಸ್ಥರು. 

ಜಾತಿ ಗಣತಿ ವರದಿ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

2 ತಿಂಗಳ ಹಿಂದೆ ಹೆರಿಗೆ ಮುಗಿಸಿಕೊಂಡು ತವರು ಮನೆಯಲ್ಲಿದ್ದ ಗೌರಮ್ಮ ಕಲ್ಲೇಶ ಗುರುಮಠ (23) ನವರಾತ್ರಿ ಪ್ರಯುಕ್ತ ಬೆಳ್ಳಂ ಬೆಳಗ್ಗೆ ಎದ್ದು ಬನ್ನಿಗಿಡಕ್ಕೆ ಹೋಗಿ ಪೂಜೆ ಸಲ್ಲಿಸಿ ನಂತರ ಕೆರೆಯಲ್ಲಿರುವ ಗಂಗಾಮಾತೆಗೆ ಪೂಜೆ ಸಲ್ಲಿಸುತ್ತಿದ್ದಳು. ಆದರೆ ಎಂದಿನಂತೆ ಗುರುವಾರ ಸಹ ಬನ್ನಿಗಿಡಕ್ಕೆ ಪೂಜೆ ಸಲ್ಲಿಸಿ ಗಂಗೆಗೆ ಪೂಜೆ ಸಲ್ಲಿಸಲು ಕೆರೆ ದಡದಲ್ಲಿರುವ ಮೆಟ್ಟಿಲು ಇಳಿದು ಪೂಜೆ ಸಲ್ಲಿಸುವಾಗ ಆಕಸ್ಮಿಕವಾಗಿ ಕಾಲು ನೀರುಪಾಲಾಗಿದ್ದಾಳೆ. ಬಿದ್ದು ಗೌರಮ್ಮ 2 ತಿಂಗಳ ಕಂದ ತೇಜಸ್‌ನನ್ನು ಅಗಲಿದ್ದು, ಹಸಿವಿನಿಂದ ಅಳುವ ಮಗುವಿಗೆ ತಾಯಿಯ ಹಾಲು ಇಲ್ಲ. ಅವನ ಹಸಿದ ಒಡಲು ಸಹ ತುಂಬದು. ಕಂದನ ಒಡಲಿಗೆ ತಾಯಿಯ ಮಮಕಾರ ಕಣ್ಮರೆಯಾಯಿತು.

ಗೋಗರೆದ ಕುಟುಂಬ 

ಗೌರಮ್ಮಳ ಆಗಲಿಕೆಗೆ ಇಡೀ ಕುಟುಂಬ ಕಣ್ಣೀರಿಟ್ಟಿತು. ಬನ್ನಿಕೊಪ್ಪ ಗ್ರಾಮಸ್ಥರು ಹಾಗೂ ಕಲ್ಲೂರಿನ ಪತಿ ಮನೆಯವರು ದೇವರಿಗೆ ಕರುಣೆ ಎಂಬುದು ಇಲ್ಲವೇ ಎಂದು ಹಿಡಿಶಾಪ ಹಾಕಿದರು. ದೇವರ ಪೂಜೆಗೆ ಹೋದಾಕಿಗೆ ದೇವರು ಹೀಗೆ ಮಾಡಬಹುದಿತ್ತೇ ಎಂದು ಗೌರಮ್ಮಳ ತಾಯಿ ಅನಸೂಯಮ್ಮ ಮಮ್ಮಲ ಮರಗಿದರು.