ಮದ್ಯಪಾನ ಸಂಪೂರ್ಣ ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಚಿತ್ರದುರ್ಗದಿಂದ ಬೆಂಗಳೂರಿಗೆ ಮಹಿಳೆಯರ ಗುಂಪಿನಿಂದ ಪಾದಯಾತ್ರೆ ಹೊರಡಲಾಗಿದೆ.
ಚಿತ್ರದುರ್ಗ: ರಾಜ್ಯದಲ್ಲಿ ಮದ್ಯಪಾನ ಸಂಪೂರ್ಣ ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಹಿಳೆಯರಿಗೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಏಕಾಂಗಿಯಾಗಿ ಧರಣಿ ನಡೆಸುವ ಮೂಲಕ ಬೆಂಬಲ ಸೂಚಿಸಿದರು.
ಪಾದಯಾತ್ರೆ ಮೂಲಕ ಬೆಂಗಳೂರಿಗೆ ಹೊರಟಿರುವ 2 ಸಾವಿರ ಮಹಿಳೆಯರ ಕಷ್ಟಗಳನ್ನು ಅರಿತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕರ್ನಾಟಕದಲ್ಲಿ ಸಂಪೂರ್ಣವಾಗಿ ಮದ್ಯಪಾನ ನಿಷೇಧಿಸಬೇಕೆಂದು ಒತ್ತಾಯಿಸಿದರು.
