ಮಹಾರಾಷ್ಟ್ರದ ನಾನಾ ಪ್ರದೇಶಗಳಿಂದ ಆಗಮಿಸಿದ್ದ ಜನರ ಜೊತೆಗೆ ತೆರಳಿದರೆ ನನಗೂ ಕೊರೋನಾ ತಗಲುವ ಸಾಧ್ಯತೆ ಇದೆ ಎನ್ನುವುದು ಮಹಿಳೆ ವಾದ| ಹೈದರಾಬಾದ್‌ನಲ್ಲಿ ನನಗೆ ತಪಾಸಣೆ ಮಾಡಲಾಗಿದ್ದು, ಕೈ ಮೇಲೆ ಸೀಲ್‌ ಹಾಕಿದ್ದಾರೆ| ಕ್ವಾರಂಟೈನ್‌ಗೆ ಒಳಪಡುತ್ತೇನೆ ಎಂದ ಮಹಿಳೆ| 

ವಿಜಯಪುರ(ಜೂ.06): ಮುಂಬೈ- ಗದಗ ರೈಲಿನಿಂದ ಇಬ್ಬರು ಮಕ್ಕಳನ್ನು ಕರೆದುಕೊಂಡು ಬಂದ ಮಹಿಳೆ ತಾನು ಮಹಾರಾಷ್ಟ್ರದಿಂದ ಬಂದವರ ಜೊತೆಗೆ ಬಸ್ಸಿನಲ್ಲಿ ತೆರಳುವುದಿಲ್ಲ ಎಂದು ಪಟ್ಟು ಹಿಡಿದ ಘಾಟನೆ ನಗರದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಮಹಾರಾಷ್ಟ್ರದ ನಾನಾ ಪ್ರದೇಶಗಳಿಂದ ಆಗಮಿಸಿದ್ದ ಜನರ ಜೊತೆಗೆ ತೆರಳಿದರೆ ನನಗೂ ಕೊರೋನಾ ತಗಲುವ ಸಾಧ್ಯತೆ ಇದೆ ಎನ್ನುವುದು ಮಹಿಳೆ ವಾದವಾಗಿತ್ತು. ನಾನು ಹೈದರಾಬಾದ್‌ನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬಂದಿದ್ದೇನೆ. ನಂತರ ಸೊಲ್ಲಾಪುರದಿಂದ ಮುಂಬೈ-ಗದಗ ರೈಲಿನಿಂದ ವಿಜಯಪುರಕ್ಕೆ ಬಂದಿದ್ದೇನೆ. ಹೈದರಾಬಾದ್‌ನಲ್ಲಿ ತಪಾಸಣೆ ಮಾಡಲಾಗಿದ್ದು, ಕೈ ಮೇಲೆ ಸೀಲ್‌ ಹಾಕಿದ್ದಾರೆ. 

ವಿಜಯಪುರ: ಕ್ವಾರಂಟೈನ್‌ಗೆ ಒಪ್ಪದ ಯುವತಿ, ಅಧಿಕಾರಿಗಳ ಜೊತೆ ಕಿರಿಕ್‌

ನಾನು ಇಂಡಿಯ ಹೊರ್ತಿ ಗ್ರಾಮಕ್ಕೆ ಹೋಗಬೇಕಿದೆ. ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಿ, ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಪಡುತ್ತೇನೆ ಎಂದು ಆ ಮಹಿಳೆ ತಿಳಿಸಿದ್ದಾರೆ. ಅಧಿಕಾರಿಗಳು ಸಮ್ಮತಿಸಿದ್ದು, ಖಾಸಗಿ ವಾಹನದಲ್ಲಿ ಮಕ್ಕಳ ಜೊತೆ ತೆರಳಲು ಅವಕಾಶ ನೀಡಿದ್ದಾರೆ.