*  ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದ ಘಟನೆ*  ಮೇ ತಿಂಗಳಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದ ರೇಣುಕಾರಾಧ್ಯ*  ಶವಕ್ಕೆ ಪೂಜೆ ಮಾಡಿದ ಕೆಲವೇ ತಾಸಿನಲ್ಲಿ ಮಳೆ  

ಚನ್ನಪಟ್ಟಣ(ಸೆ.03): ಮಳೆ ಬರಲಿಲ್ಲ ಎಂದು ಮೌಢ್ಯಕ್ಕೆ ಸಿಲುಕಿದ ಗ್ರಾಮಸ್ಥರು ಮೂರು ತಿಂಗಳ ಹಿಂದೆ ನಿಧನರಾಗಿದ್ದ ವ್ಯಕ್ತಿಯ ಗೋರಿಯನ್ನು ಬಗೆದು ಪೂಜೆ ಸಲ್ಲಿಸಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. 

Add Asianetnews Kannada as a Preferred SourcegooglePreferred

ಗ್ರಾಮದ ಅರ್ಚಕರಾಗಿದ್ದ ರೇಣುಕಾರಾಧ್ಯ(68) ಮೇ ತಿಂಗಳಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದರು. ಮೃತದೇಹವನ್ನು ಸಂಪ್ರದಾಯದಂತೆ ಸ್ವಂತ ಜಮೀನಿನಲ್ಲಿ ಹೂಳಲಾಗಿತ್ತು. ಮೃತರಿಗೆ ಚರ್ಮವ್ಯಾದಿ(ತೊನ್ನು) ಇದ್ದು ಇವರನ್ನು ಹೂತಿರುವ ಕಾರಣ ಮಳೆ ಬರುತ್ತಿಲ್ಲ ಎಂಬ ಮೌಢ್ಯಕ್ಕೆ ಗ್ರಾಮಸ್ಥರು ಕಟ್ಟು ಬಿದ್ದಿದ್ದಾರೆ. 

ಬೆಳಗಾವಿ: ಗೋರಿ ಮೇಲೆ ಕಾಗೆಗೆ ಇಟ್ಟಿದ್ದ ಪಿಂಡ ತಿಂದ ಯುವಕರು!

ರಾತ್ರಿ ವೇಳೆ ಶವದ ತಲೆಯ ಭಾಗವನ್ನು ತೆಗೆದು ಪೂಜೆ ಸಲ್ಲಿಸಿ ಹಾಗೇ ಬಿಟ್ಟು ಹೋಗಿದ್ದಾರೆ. ಕಾಕತಾಳೀಯ ಎಂಬಂತೆ ಈ ಘಟನೆಯಾದ ಕೆಲವೇ ತಾಸಿನಲ್ಲಿ ಮಳೆಯಾಗಿದೆ. ಮೃತರ ಪುತ್ರ ಅಕ್ಕೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.