ಕುರಿ ಕಾಯುವ ವಿಷಯಕ್ಕೆ ಸಂಬಂಧಿಸಿದಂತೆ ಯುವಕನಿಗೆ ಬುದ್ಧಿವಾದ ಹೇಳಿದ ಪಾಲಕರು| ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ| ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದ ಘಟನೆ|

ಕುಷ್ಟಗಿ(ಏ.18): ಪಟ್ಟಣದ ದುರ್ಗಾ ಕಾಲೋನಿಯ ನಿವಾಸಿ ಜಂಬಣ್ಣ ನಿಂಗಪ್ಪ ಗಾಂಜಿ (18) ಎನ್ನುವ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.

Add Asianetnews Kannada as a Preferred SourcegooglePreferred

ಯುವಕನಿಗೆ ಮನೆಯಲ್ಲಿ ಪಾಲಕರು ಬುದ್ಧಿವಾದ ಹೇಳಿದ ಪ್ರಸಂಗಕ್ಕೆ ಸಂಬಂಧಿಸಿದಂತೆ ಮನನೊಂದು ಪಟ್ಟಣದ ಹೊರವಲಯದ ಗಿಡವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾ​ನೆ.

ಲಾಕ್ ಡೌನ್ ವಿಸ್ತರಣೆಗೆ ಬೇಸತ್ತು ನೇಣು ಬಿಗಿದು ಅರ್ಚಕ ಆತ್ಮಹತ್ಯೆ..!

ಇನ್ನು ಯುವಕ ಮನೆಯಲ್ಲಿರುವ ಕುರಿಗಳನ್ನು ಕಾಯುವ ವಿಷಯಕ್ಕೆ ಸಂಬಂಧಿಸಿದಂತೆ ಪಾಲಕರು ಗುರುವಾರ ರಾತ್ರಿ ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕಾಗಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಯುವಕನ ತಂದೆ ನಿಂಗಪ್ಪ ಗಾಜಿ ನೀಡಿದ ದೂರಿನ ಮೇರೆಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.