Asianet Suvarna News Asianet Suvarna News

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ಧ್ವಜಸ್ತಂಭ ನೆಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಧ್ವಜಸ್ತಂಭ ನೆಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬಸ್ ನಿಲ್ದಾಣದ ವಕ್ಕುಂದ ಗ್ರಾಮದ ಮುಂದೆ ಧ್ವಜಸ್ತಂಭ ನೆಡಲು ಪ್ರಜ್ವಲ್ ಹಾಗೂ ಸ್ನೇಹಿತರು ತಯಾರಿ ನಡೆಸಿದ್ದರು. ಈ ವೇಳೆ ಸರ್ವಿಸ್ ವೈಯರ್ ತಾಕಿದ್ದರಿಂದ ವಿದ್ಯುತ್ ಪ್ರವಹಿಸಿ ಪ್ರಜ್ವಲ್ ಮೃತಪಟ್ಟಿದ್ದಾನೆ. 

Young Man Dies due to Electrocution in Belagavi grg
Author
First Published Oct 29, 2023, 10:38 AM IST

ಬೆಳಗಾವಿ(ಅ.29):  ಧ್ವಜಸ್ತಂಭ ನೆಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. ಪ್ರಜ್ವಲ್ ಚನ್ನಗೌಡ ಮುನೇಪ್ಪನವರ(18) ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ. 

ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಧ್ವಜಸ್ತಂಭ ನೆಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬಸ್ ನಿಲ್ದಾಣದ ವಕ್ಕುಂದ ಗ್ರಾಮದ ಮುಂದೆ ಧ್ವಜಸ್ತಂಭ ನೆಡಲು ಪ್ರಜ್ವಲ್ ಹಾಗೂ ಸ್ನೇಹಿತರು ತಯಾರಿ ನಡೆಸಿದ್ದರು. ಈ ವೇಳೆ ಸರ್ವಿಸ್ ವೈಯರ್ ತಾಕಿದ್ದರಿಂದ ವಿದ್ಯುತ್ ಪ್ರವಹಿಸಿ ಪ್ರಜ್ವಲ್ ಮೃತಪಟ್ಟಿದ್ದಾನೆ. 

ಬೆಳಗಾವಿ: ಮನೆಯ ಮುಂದಿನ ಹುಲ್ಲು ತೆಗೆಯುವ ವೇಳೆ ವಿದ್ಯುತ್ ತಗುಲಿ, ತಂದೆ, ಮಗ ಸಾವು..!

ತಕ್ಷಣ ಸ್ಥಳೀಯರು ಪ್ರಜ್ವಲ್‌ನನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಪ್ರಜ್ವಲ್ ಕೊನೆಯುಸಿರೆಳಿದಿದ್ದಾನೆ. ಬೈಲಹೊಂಗಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Follow Us:
Download App:
  • android
  • ios